ಬಾಳಿಲ: ಬಾಳಿಲದ ನಾಗರೀಕ ಸೇವಾ ಸಮಿತಿಯ ವತಿಯಿಂದ ಆಯೋಜಿಸಿದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿ ಅನುಮತಿ ಇಲ್ಲದೆ ಡಿಜೆ ಅಳವಡಿಸಿರುವುದು ಮತ್ತು ಪೊಲೀಸರು ಇದನ್ನು ನಿರಾಕರಿಸಿದ ವಿಚಾರದ ಹಿನ್ನಲೆಯಲ್ಲಿ ಉಂಟಾದ ವಿವಾದ
ಶಾಸಕರ ಹಾಗೂ ಬಿಜೆಪಿ ಮುಖಂಡರ ಮಧ್ಯಪ್ರವೃಶದಿಂದ ಮಾತುಕತೆಯ ಮೂಲಕ ಇತ್ಯರ್ಥಗೊಂಡಿದೆ ಎಂದು ತಿಳಿದು ಬಂದಿದೆ.
ಶೋಭಾಯಾತ್ರೆಯಲ್ಲಿ ಅನುಮತಿ ಇಲ್ಲದೆ ಡಿಜೆ ಅಳವಡಿಸಿರುವುದನ್ನು ತೆಗೆಯುವಂತೆ ಪೊಲೀಸರು ಸೂಚಿಸಿದ್ದರು. ಅದಕ್ಕೆ ಆಯೋಜಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮಹಾಪೂಜೆ ಮತ್ತು ಶೋಭಾಯಾತ್ರೆ ವಿಳಂಬ ಆಗಿತ್ತು. ವಿಷಯ ತಿಳಿದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಅದ್ಯಕ್ಷ ಹರೀಶ್ ಕಂಜಿಪಿಲಿ ಮತ್ತಿತರರು ಸ್ಥಳಕ್ಕೆ ಆಗಮಿಸಿ ಪೊಲೀಸರ ಮತ್ತು ಸಂಘಟಕರ ಜೊತೆ ಮಾತುಕತೆ ನಡೆಸಿ ವಿವಾದ ಇತ್ಯರ್ಥ ಪಡಿಸಿದ್ದಾರೆ. ಬಳಿಕ ಶೋಭಾಯಾತ್ರೆ ಸಂಪನ್ನಗೊಂಡಿತು.