ಸುಳ್ಯ: ಅ.1ರಂದು ನಡೆಯಲಿರುವ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಗಾಣಿಗ ಸಮ್ಮಿಲನ -2023 ಕಾರ್ಯಕ್ರಮದ ಪೂರ್ವ ಭಾವಿಯಾಗಿ ಗಾಣಿಗ ಸಮಾಜ ಬಾಂಧವರಿಗೆ ಕ್ರೀಡೋತ್ಸವ ಮತ್ತು ಭಕ್ತಿ ಗೀತೆ ಸ್ಪರ್ಧೆಯು ಸೆ.24 ರಂದು ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ
ಮೈದಾನದಲ್ಲಿ ಜರುಗಿತು. ಕ್ರೀಡೋತ್ಸವವನ್ನು ನಿವೃತ್ತ ಯೋಧ ಲೋಕೇಶ್ ಇರಂತಮಜಲು ಉದ್ಘಾಟಿಸಿದರು. ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಶಂಕರ ಪಾಟಾಳಿ ಪರಿವಾರಕಾನ, ಸಂಘದ ಆಂತರಿಕ ಲೆಕ್ಕ ಪರಿಶೋಧಕ ಮಹಾಲಿಂಗನ್ ಬಾಜರ್ತೊಟ್ಟಿ, ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದ ಕರಣಿಕ ಚಂದ ಕುಡೆಕಲ್ಲು ಉಪಸ್ಥಿತರಿದ್ದರು. ಉದಯರವಿ ಕಲ್ಚಾರು ಸ್ವಾಗತಿಸಿ, ಸಂಚಾಲಕ ಪ್ರವೀಣ್ ಜಯನಗರ ಕಾರ್ಯಕ್ರಮ ನಿರೂಪಿಸಿದರು.ಸಮಾಜ ಬಾಂಧವರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.