ಸುಳ್ಯ: ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ 7ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಎ.21 ಮತ್ತು 22 ರಂದು ವಿಜ್ರಂಭಣೆಯಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ. ನಾಯರ್ ಅವರಿಗೆ ರಾಘವೇಂದ್ರ ಮಠದ ವತಿಯಿಂದ ನೀಡುವ ಪ್ರಥಮ ಶ್ರೀಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು
ಶ್ರೀ ಗುರು ರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು
ಶ್ರೀ ಗುರುರಾಯರ ಮಠದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀಹರಿ ಎಳಚಿತ್ತಾಯರ ಮಾರ್ಗದರ್ಶನದಲ್ಲಿ ನಡೆಯಲಿದೆ. ಎ.21ರಂದು ಸೋಮವಾರ ಪೂರ್ವಾಹ್ನ 7 ರಿಂದ ಮಹಾಗಣಪತಿ ಹೋಮ ನಡೆಯಲಿದೆ. ಸಂಜೆ 5ರಿಂದ ಪಲ್ಲಕ್ಕಿಯಲ್ಲಿ ರಾಯರ ಪಟ್ಟಣ ಸವಾರಿ ನಡೆಯಲಿದೆ.
ಚೆಂಡೆ, ಡೋಲು, ವಾದ್ಯ, ಆಕರ್ಷಕ ಭಜನೆ, ಕುಣಿತ ಭಜನೆ, ಭಕ್ತ ಸಮೂಹದೊಂದಿಗೆ ರಾಯರು ಪಲ್ಲಕಿಯಲ್ಲಿ ಸುಳ್ಯ ನಗರದಲ್ಲಿ ಸಾಗಿ ಬರಲಿದ್ದಾರೆ. ಎ.22ರಂದು ಸೋಮವಾರ ಪೂರ್ವಾಹ್ನ 9 ರಿಂದ
ಪಂಚ ವಿಂಶತಿ ಕಲಶ ಪೂಜೆ, ಕಲಶಾಭಿಷೇಕ ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಮಂತ್ರ ಹೋಮ, ಶ್ರೀ ರಾಮ ತಾರಕ ಮಂತ್ರ ಹೋಮ ನಡೆದು ಮಧ್ಯಾಹ್ನ 12 ರಿಂದ ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಕ್ಕೆ ಆಶ್ಲೇಷಾ ಬಲಿ ಪೂಜೆ ರಾತ್ರಿ 7 ರಿಂದ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ತಿಳಿಸಿದ್ದಾರೆ.

ಡಾ.ಆರ್.ಕೆ.ನಾಯರ್ ಅವರಿಗೆ ಪ್ರಶಸ್ತಿ:
ಎ.22 ರಂದು ಪೂ.11ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ
ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್ ಅವರಿಗೆ ರಾಘವೇಂದ್ರ ಮಠದ ವತಿಯಿಂದ ನೀಡುವ ಪ್ರಥಮ ಶ್ರೀಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು.ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಅಧ್ಯಕ್ಷತೆ ವಹಿಸುವರು. ಸರಕಾರಿ

ಡಾ.ಆರ್.ಕೆ.ನಾಯರ್
ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಅಭಿದನಂದನಾ ಭಾಷಣ ಮಾಡುವರು. ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ, ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿ ಸುಬ್ರಹ್ಮಣ್ಯ ಮೂಡಿತ್ತಾಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಭಜನಾ ಕಾರ್ಯಕ್ರಮ:
ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಅಂಗವಾಗಿ
ಭಜನಾ ಕಾರ್ಯಕ್ರಮ ನಡೆಯಲಿದೆ. ಎ. 21ರಂದು ಆದಿತ್ಯವಾರ ಸಂಜೆ 4 ರಿಂದ ಶ್ರೀ ಗುರು ರಾಘವೇಂದ್ರ ಮಕ್ಕಳ ಭಜನಾ ತಂಡದವರಿಂದ ಭಜನೆ ನಡೆಯಲಿದೆ. ಎ.22 ರಂದು ಸೋಮವಾರ ಪೂ.10ರಿಂದ ದೀಪಾಂಜಲಿ ಭಜನಾ ಮಂಡಳಿ ಶಾಂತಿನಗರ ಇವರಿಂದ
ಭಜನಾ ಕಾರ್ಯಕ್ರಮ ಜರುಗಲಿದೆ. ಸಂಜೆ 6ರಿಂದ ಶ್ರೀ ಸದಾಶಿವ ಭಜನಾ ಮಂಡಳಿ ಆಲೆಟ್ಟಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಕಾರ್ಯದರ್ಶಿ ರಾಮ್ಕುಮಾರ್ ಹೆಬ್ಬಾರ್, ಖಜಾಂಜಿ ಮುರಳೀಕೃಷ್ಣ ಡಿ.ಆರ್, ಟ್ರಸ್ಟಿ ರಮೇಶ್ ಕುಮಾರ್, ಶಿವಳ್ಳಿ ಸಂಪನ್ನದ ಗೌರವಾಧ್ಯಕ್ಷ ಗಂಗಾಧರ ಮಟ್ಟಿ ಉಪಸ್ಥಿತರಿದ್ದರು.