ಗುತ್ತಿಗಾರು:ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ಚುನಾವಣೆ ನಡೆಯಲಿದೆ. ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳು ಎಲ್ಲಾ 12 ಸ್ಥಾನಗಳಲ್ಲಿಯೂ ಸ್ಪರ್ಧಿಸುತ್ತಿದ್ದಾರೆ.ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ

ಸಾಮಾನ್ಯ ಕ್ಷೇತ್ರದಿಂದ ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ. ನವೀನ್ ಬಾಳುಗೋಡು, ರವೀಂದ್ರ ಕಾನಾವು ಅಡ್ಡನಪಾರೆ. ಪದ್ಮನಾಭ ಮೀನಾಜೆ ಕಣದಲ್ಲಿದ್ದಾರೆ.
ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಕೃಷ್ಣಯ್ಯ ಮೂಲೆತೋಟ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಿನ್ಯಾಸ್ ಕೊಚ್ಚಿ, ಮಹಿಳಾ ಕ್ಷೇತ್ರದಿಂದ ತಿಲಕ ಕೋಲ್ಯ, ವಿನುತಾ ಜಾಕೆ ಕಣದಲ್ಲಿದ್ದಾರೆ.ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಜನಾರ್ದನ ನಾಯ್ಕ ಅಚ್ರಪ್ಪಾಡಿ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಕುಂಞ ಬಳ್ಳಕ್ಕ ಸ್ಪರ್ಧಿಸುತ್ತಿದ್ದಾರೆ.