ಗುತ್ತಿಗಾರು:ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಕ್ಲೀನ್ ಸ್ವೀಪ್ ಮಾಡಿದೆ. ಎಲ್ಲಾ 12 ಸ್ಥಾನಗಳಲ್ಲಿಯೂ ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೇತೃತ್ವದಲ್ಲಿ ಸ್ಪರ್ಧಿಸಿದ
ಬಿಜೆಪಿ ಬೆಂಬಲಿತ ಸಹಕಾರ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ
ಸಹಕಾರ ಭಾರತಿಯ ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ. ನವೀನ್ ಬಾಳುಗೋಡು, ರವೀಂದ್ರ ಕಾನಾವು ಅಡ್ಡನಪಾರೆ, ಪದ್ಮನಾಭ ಮೀನಾಜೆ ಗೆಲುವು ಸಾಧಿಸಿದ್ದಾರೆ.

ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು
ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಕೃಷ್ಣಯ್ಯ ಮೂಲೆತೋಟ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಿನ್ಯಾಸ್ ಕೊಚ್ಚಿ, ಮಹಿಳಾ ಕ್ಷೇತ್ರದಿಂದ ತಿಲಕ ಕೋಲ್ಯ, ವಿನುತಾ ಜಾಕೆ .
ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಜನಾರ್ದನ ನಾಯ್ಕ ಅಚ್ರಪ್ಪಾಡಿ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಕುಂಞ ಬಳ್ಳಕ್ಕ,
ಗೆಲುವು ಸಾಧಿಸಿದರು.