ಸುಳ್ಯ: ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಹಿಂದಿ ಶಿಕ್ಷಕಿಯರ ನೇತೃತ್ವದಲ್ಲಿ ಆಚರಿಸಲಾಯಿತು. 3,4,5 ಮತ್ತು 6ನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ಕಾರ್ಯಕ್ರಮದ ಮೊದಲಿಗೆ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಹಿಂದಿ ಭಾಷೆಯ ಮಹತ್ವದ ಕುರಿತು ತಿಳಿಸಿದರು. ಬಳಿಕ 8ನೇ ತರಗತಿಯ
ಸೋನಾ ನಾರ್ಕೋಡು ಹಿಂದಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. 8ನೇ ತರಗತಿಯ ಸೀಮಾ ಆಯಿಷಾ ಮತ್ತು ಶ್ರದ್ಧಾ ಪೈ ಹಿಂದಿ ದಿನದ ಪ್ರಾಮುಖ್ಯತೆಯ ಕುರಿತು ತಿಳಿಸಿದರು . ಯು ಕೆ ಜಿ, ಒಂದು ಮತ್ತು ಎರಡನೇ ತರಗತಿಯ ಮಕ್ಕಳು ಹಿಂದಿ ಹಾಡನ್ನು ಹಾಡುವುದರ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಬಳಿಕ ಎಂಟನೇ ತರಗತಿಯ ವಿದ್ಯಾರ್ಥಿನಿಯರು ಹಾಡಿದ ಹಿಂದಿ ಗೀತೆಯು ಕಾರ್ಯಕ್ರಮಕ್ಕೆ ಮತ್ತಷ್ಟು ಶೋಭೆಯನ್ನು ತಂದುಕೊಟ್ಟಿತ್ತು. 8ನೇ ತರಗತಿಯ ನಶ್ವ ವಿದ್ಯಾರ್ಥಿಗಳಿಗಾಗಿ ಹಿಂದಿ ಭಾಷೆಯ ಕುರಿತು ಕೆಲವು ಸಾಮಾನ್ಯ ಜ್ಞಾನ ಪ್ರಶ್ನೆಗಳನ್ನು ಕೇಳಿದಳು. ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ ವಿದ್ಯಾರ್ಥಿಗಳಲ್ಲಿ ಭಾಷಾಪ್ರೇಮ ಬೆಳೆಸಲು ಇದೊಂದು ಉತ್ತಮ ಕಾರ್ಯಕ್ರಮ ಎಂಬುದಾಗಿ ತಿಳಿಸಿದರು. ಈ ಕಾರ್ಯಕ್ರಮವನ್ನು 8ನೇ ತರಗತಿಯ ಮನ್ವಿತಾ ಸಿ ಹೆಚ್ ನಿರೂಪಿಸಿ , ಆಕಾಶ್ ಧನ್ಯವಾದವನ್ನು ಸಲ್ಲಿಸಿದನು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.