ಚಿತ್ರ:ಶಾಂತಲಾ ಸ್ಟುಡಿಯೋ ಸುಬ್ರಹ್ಮಣ್ಯ.
ಸುಬ್ರಹ್ಮಣ್ಯ: ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜು.8ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ್ದಾರೆ.
ಜು.9ರಂದು ಅವರು ಬೆಳಗ್ಗೆ ಆಶ್ಲೇಷ ಪೂಜೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ತಿಳಿದು ಬಂದಿದೆ.ಕುಕ್ಕೆಗೆ ಆಗಮಿಸಿದ ಸಚಿವರನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಡಾ. ರಘು, ಮಹೇಶ್ ಕುಮಾರ್ ಕರಿಕ್ಕಳ, ಸೌಮ್ಯ ಭರತ್, ಪ್ರವೀಣ ರೈ ಮರುವಂಜ, ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ.ಕೃಷ್ಣಪ್ಪ, ಕೆ.ಪಿ.ಸಿ.ಸಿ

ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್, ದೇವಸ್ಥಾನದ
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಮತ್ತಿತರರು ಸೇರಿ ಸ್ವಾಗತಿಸಿದರು. ಮಾಸ್ಟರ್ ಪ್ಲಾನ್ ಸಮಿತಿಯ ಲೋಲಾಕ್ಷ ಕೈಕಂಬ, ಪವನ್ ಎಂ.ಡಿ ಕಡಬ ಗ್ಯಾರಂಟಿ ಸಮಿತಿ ಅಧ್ಯಕ್ಷ ಸುಧೀರ್ ಶೆಟ್ಟಿ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಸುಳ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಕಿಶೋರ್ ಕುಮಾರ್ ಅರಂಪಾಡಿ, ಕಾರ್ತಿಕ್, ಪರಮೇಶ್ವರ ಕೆಂಬಾರೆ, ಹರ್ಷಿತ್ ಕೊರ್ಬಟ, ಕೃಷ್ಣಮೂರ್ತಿ ಭಟ್, ದಿನೇಶ್ ಎಣ್ಣೆಮಜಲು, ಗೋಪಾಲ ಎಣ್ಣೆಮಜಲು, ಪ್ರಶಾಂತ್ ಮರುವಂಜ, ಜಿ.ಕೆ ಹಮೀದ್ , ಸಿದ್ದಿಕ್ ಕೊಕ್ಕೊ, ಶೇಷಕುಮಾರ್, ದೇವಸ್ಥಾನದ ಶಿಷ್ಟಾಚಾರ ವಿಭಾಗದ ಜಯರಾಮ ರಾವ್, ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು.














