ಮುಂಬೈ:ಭಾರತ ತಂಡವು ಶುಕ್ರವಾರ ನಡೆಯಲಿರುವ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಬಿಡುವು ಪಡೆದುಕೊಂಡಿರುವ ರೋಹಿತ್ ಶರ್ಮಾ ಅವರ ಬದಲಿಗೆ ಹಾರ್ದಿಕ್ ತಂಡದ ನಾಯಕತ್ವ ವಹಿಸಿದ್ದಾರೆ. ಇದೇ ವರ್ಷ ಭಾರತದಲ್ಲಿಯೇ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಪೂರ್ವಭಾವಿ ಸಿದ್ದತೆಯ ದೃಷ್ಟಿಯಿಂದ ಈ ಸರಣಿ ಮಹತ್ವದ್ದಾಗಿದೆ.ಬಾರ್ಡರ್–ಗಾವಸ್ಕರ್ ಟ್ರೋಫಿ
ಟೆಸ್ಟ್ ಸರಣಿಯನ್ನು ಗೆದ್ದಿರುವ ಭಾರತ ತಂಡದ ಆಟಗಾರರಲ್ಲಿ ಆತ್ಮವಿಶ್ವಾಸ ಹೆಚ್ಚಿದೆ. ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಸಾಧನೆಯನ್ನೂ ಮಾಡಿರುವ ಶುಭಮನ್ ಈ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಬಹುದು. ಅವರೊಂದಿಗೆ ಕೆ.ಎಲ್. ರಾಹುಲ್ ಅಥವಾ ಇಶಾನ್ ಕಿಶನ್ ಕಣಕ್ಕಿಳಿಯಬಹುದು.
ಸೂರ್ಯಕುಮಾರ್ ಯಾದವ್, ಆಲ್ರೌಂಡರ್ ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್ ಅವರೂ ಬ್ಯಾಟಿಂಗ್ನಲ್ಲಿ ಉತ್ತಮ ಕಾಣಿಕೆ ನೀಡುವ ಭರವಸೆ ಇದೆ. ವೇಗಿ ಉಮ್ರಾನ್ ಮಲಿಕ್ ಮತ್ತು ಜೈದೇವ್ ಉನದ್ಕತ್ ಅವರಲ್ಲಿ ಒಬ್ಬರಿಗೆ ಸ್ಥಾನ ಸಿಗಬಹುದು. ಬೌಲಿಂಗ್ ವಿಭಾಗದಲ್ಲಿ ಕುಲದೀಪ್ ಯಾದವ್ ಜಡೇಜ ಮತ್ತು ಚಾಹಲ್, ಮಹಮ್ಮದ್ ಸಿರಾಜ್ ಸ್ಥಾನ ಪಡೆಯುವ ತವಕದಲ್ಲಿದ್ದಾರೆ.ಡೇವಿಡ್ ವಾರ್ನರ್, ಗಾಯದಿಂದ ಚೇತರಿಸಿಕೊಂಡು ಬಂದಿರುವ ಗ್ಲೆನ್ ಮ್ಯಾಕ್ಸ್ವೆಲ್, ಮಿಚೆಲ್ ಮಾರ್ಷ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಅವರು ಯಾವುದೇ ಕ್ರಮಾಂಕದಲ್ಲಿಯೂ ಕ್ರೀಸ್ಗೆ ಬಂದು ಮಿಂಚುವ ತಾಕತ್ತು ಹೊಂದಿದ್ದಾರೆ. ಇವರು ಆತಿಥೇಯ ಬೌಲಿಂಗ್ ಪಡೆಗೆ ಸವಾಲಾಗುವುದು ಖಚಿತ.
ತಂಡಗಳು
ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್. ರಾಹುಲ್, ಇಶಾನ್ ಕಿಶನ್ (ವಿಕೆಟ್ಕೀಪರ್), ರವೀಂದ್ರ ಜಡೇಜ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜೈದೇವ್ ಉನದ್ಕತ್.
ಆಸ್ಟ್ರೇಲಿಯಾ: ಸ್ಟೀವನ್ ಸ್ಮಿತ್ (ನಾಯಕ), ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಾರ್ನಸ್ ಲಾಬುಷೇನ್, ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮರಾನ್ ಗ್ರೀನ್, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆಷ್ಟನ್ ಆಗರ್, ಮಿಚೆಲ್ ಸ್ಟಾರ್ಕ್, ನೇಥನ್ ಎಲಿಸ್, ಆ್ಯಡಂ ಜಂಪಾ.
ಪಂದ್ಯ ಆರಂಭ: ಮಧ್ಯಾಹ್ನ 1.30