ನವದೆಹಲಿ:ಪಾಕಿಸ್ತಾನವು ಭಾರತದ ವಿರುದ್ಧ ಶುಕ್ರವಾರ ರಾತ್ರಿಯೂ ಡ್ರೋನ್ ದಾಳಿ ಮುಂದುವರಿಸಿದ್ದು ಈ ಡ್ರೋನ್ಗಳನ್ನು ನಾಶಪಡಿಸಿದ ಭಾರತೀಯ ಸೇನೆ ದಿಟ್ಟ ಪ್ರತ್ಯುತ್ತರ ನೀಡಿದೆ. ಪಾಕ್ನ ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ ಎಂದು ವರದಿಯಾಗಿದೆ. ಪಾಕ್ನಲ್ಲಿರುವ ಉಗ್ರರ ದಮನಕ್ಕೆ ಭಾರತ ಸೇನೆಯು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಆರಂಭಿಸಿದ ಬಳಿಕ ಉಭಯ
ದೇಶಗಳ ನಡುವಿನ ಸಂಘರ್ಷ ತಾರಕಕ್ಕೆ ಏರಿದೆ. ಪಾಕ್ ಸೇನೆಯು ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಡ್ರೋನ್ ದಾಳಿಗಳನ್ನು ನಡೆಸಲು ಪಾಕಿಸ್ತಾನ ಬಳಸುತ್ತಿದ್ದ ಮಿಲಿಟರಿ ಪೋಸ್ಟ್ಗಳು ಮತ್ತು ಲಾಂಚ್ಪ್ಯಾಡ್ಗಳನ್ನು ಭಾರತೀಯ ಸೇನಾಪಡೆಗಳು ನಾಶಪಡಿಸಿವೆ ಎಂದು ವರದಿಯಾಗಿದೆ. ಪಾಕಿಸ್ತಾನ ಸೇನೆಯು ಶುಕ್ರವಾರ ರಾತ್ರಿಯೂ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆ, ಪಂಜಾಬ್ನ ಫಿರೋಜ್ಪುರ, ರಾಜಸ್ಥಾನದ ಪೋಖರಣ್ ಮತ್ತಿತರ ಕಡೆಗಳಲ್ಲಿ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿದೆ. ಇವುಗಳನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಹೆಚ್ಚಿನ ಭಾಗಗಳಲ್ಲಿ ಬ್ಲ್ಯಾಕ್ಔಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ಡ್ರೋನ್ ಕ್ಷಿಪಣಿ ದಾಳಿ ನಡೆಸಿದೆ.ವರದಿಯಾಗಿದೆ.ರಾಜಧಾನಿ ಇಸ್ಲಾಮಾಬಾದ್ ಬಳಿಯ ರಾವಲ್ಪಿಂಡಿಯ ಗ್ಯಾರಿಸನ್ ನಗರದಲ್ಲಿರುವ ನೂರ್ ಖಾನ್ ವಾಯುನೆಲೆ, ಚಕ್ವಾಲ್ ನಗರದ ಮುರಿಯ್ ವಾಯುನೆಲೆ ಮತ್ತು ಪೂರ್ವ ಪಂಜಾಬ್ ಪ್ರಾಂತ್ಯದ ಜಾಂಗ್ ಜಿಲ್ಲೆಯ ರಫಿಕಿ ವಾಯುನೆಲೆಗಳು ಸೇರಿ ಪಾಕ್ ಮಿಲಿಟರಿ ನೆಲೆಗಳ ಮೇಲೆ ಭಾರತ ದಾಳಿ ನಡೆಸಿದೆ ಎಂದು ಹೇಳಲಾಗಿದೆ.