ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರೂ ಸ್ಮಾರಕ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಕಾಲೇಜಿನ ಐಕ್ಯುಎಸಿ, ಕನ್ನಡ ವಿಭಾಗ, ಕನ್ನಡ ಸಂಘ, ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಸಂಘದ ಆಶ್ರಯದಲ್ಲಿ ಕಾಲೇಜಿನ
ಸಭಾಂಗಣದಲ್ಲಿ ಆ.12 ರಂದು ನಡೆಯುವ ‘ಆಟಿನ ನೆಂಪು- ಸಂಪ್ರದಾಯದ ಮೆಲ್ಕ್’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅನಾವರಣ ಮಾಡಲಾಯಿತು.ಕಾಲೇಜಿನ ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ. ಆಮಂತ್ರಣ ಪತ್ರಿಕೆ ಅನಾವರಣ ಮಾಡಿದರು.ಅರೆಭಾಷೆ ಅಕಾಡೆಮಿ ಸದಸ್ಯ ಸಂಚಾಲಕಿ ಚಂದ್ರಾವತಿ ಬಡ್ಡಡ್ಕ, ಕಾರ್ಯಕ್ರಮದ ಸಂಯೋಜಕಿ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಅನುರಾಧಾ ಕುರುಂಜಿ,ಐಕ್ಯುಎಸಿ ಸಂಯೋಜಕಿ ಡಾ.ಮಮತ.ಕೆ, ಉಪನ್ಯಾಸಕರಾದ ಕುಲ್ದೀಪ್.ಪಿ.ಪಿ, ಕೃತಿಕಾ.ಕೆ.ಜೆ, ಪ್ರೇಮಲತ.ಎಂ. ಉಪಸ್ಥಿತರಿದ್ದರು.





























