ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಣ ಉದ್ವಿಗ್ನತೆ ಉಲ್ಬಣಿಸಿರುವ ಕಾರಣ, ಈ ಬಾರಿಯ ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಉಳಿದ ಪಂದ್ಯಗಳನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಗುರುವಾರ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಭದ್ರತಾ ದೃಷ್ಠಿಯಿಂದ ಅರ್ಧಕ್ಕೆ ರದ್ದುಗೊಳಿಸಲಾಯಿತು.
ಇದರ ಬೆನ್ನಲ್ಲೇ, ಟೂರ್ನಿ ಮುಂದುವರಿಕೆ ಬಗ್ಗೆ ಅನಿಶ್ಚಿತತೆಯ ಮೋಡ ಕವಿದಿತ್ತು.ಇದೀಗ ಟೂರ್ನಿ ಒಂದು ವಾರ ಮುಂದೂಡುವುದಾಗೊ ಬಿಸಿಸಿಐ ಖಾತ್ರಿಪಡಿಸಿದೆ.