ಮಂಗಳೂರು;ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಮಹತ್ವದ್ದಾಗಿದೆ ಎಂದು ದ.ಕ ಜಿಲ್ಲಾಧಿಕಾರಿ(ಪ್ರಭಾರ ) ಮತ್ತು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಡಾ.ಕುಮಾರ್ ಹೇಳಿದ್ದಾರೆ. ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ (ಐಡಬ್ಲ್ಯುಎಫ್ ಜೆ )ಇದರ 73ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಸಮಾಜದ ಮಹತ್ವದ ಅಂಗವಾದ ಪತ್ರಿಕೋದ್ಯಮ ತನ್ನ ವೃತ್ತಿಯ ಪಾವಿತ್ರ್ಯತೆ ಯನ್ನು ಉಳಿಸಿಕೊಳ್ಳಬೇಕಾದ ಅಗತ್ಯವಿದೆ.ಪತ್ರಿಕಾ ವೃತ್ತಿಗೆ ಅಧ್ಯಯನಶೀಲತೆ ಅಗತ್ಯವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಚಲಾವಣೆಯ ಸಂದರ್ಭದಲ್ಲಿ ನಮ್ಮ ಅಂತರಂಗದ ಸ್ವಾತಂತ್ರ್ಯ ವನ್ನು ಒತ್ತೆ ಇಡಬಾರದು ಎಂದು ಡಾ.ಕುಮಾರ್ ಹೇಳಿದರು.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿಯ ಸದಸ್ಯ ಪಿ.ಬಿ.ಹರೀಶ್ ರೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಉಪನ್ಯಾಸಕರರಾಗಿ ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್ ಭಾಗವಹಿಸಿದ್ದರು.
ಸಂಘದ ಪದಾಧಿಕಾರಿಗಳಾದ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್ ವಂದಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್ ಸಮಕಾಲೀನ ಪತ್ರಿಕೋದ್ಯಮದ ಬಗ್ಗೆ ಉಪನ್ಯಾಸ ನೀಡಿದರು.