The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಜೇಸಿಐ ಪಂಜ ಪಂಚಶ್ರೀ ರಜತ ರಶ್ಮಿ ಸಂಭ್ರಮ ಸಂಪನ್ನ: ಭವ್ಯ ಭಾರತದ ನಿರ್ಮಾಣದಲ್ಲಿ ಯುವ ಜನತೆ ಪಾತ್ರ ಮಹತ್ವದ್ದು: ಸಂತೋಷ್ ಹೆಗ್ಡೆ

by ದಿ ಸುಳ್ಯ ಮಿರರ್ ಸುದ್ದಿಜಾಲ November 13, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 13, 2022
Share this article

ಪಂಜ: ಜೇಸಿಐ ಪಂಜ ಪಂಚಶ್ರೀ ಇದರ ಬೆಳ್ಳಿ ಹಬ್ಬ-‘ರಜತ ರಶ್ಮಿ’ ಕಾರ್ಯಕ್ರಮದ ಸಮಾರೋಪ ಸಮಾರಂಭ ನ.12 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವಠಾರದಲ್ಲಿ ನಡೆಯಿತು.
ಕರ್ನಾಟಕ ಸರ್ಕಾರ, ವಿಶ್ರಾಂತ ಲೋಕಾಯುಕ್ತ ಸಂತೋಷ್ ಹೆಗ್ಡೆ ‘ಭವ್ಯ ಭಾರತದ ನಿರ್ಮಾಣದಲ್ಲಿ ಯುವ ಜನತೆ ಪಾತ್ರ’ ವಿಷಯದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ದೇಶ ಕಟ್ಟುವುದರಲ್ಲಿ ಮತ್ತು ಸ್ವಚ್ಛ ಸಮಾಜದ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಿರ್ಮಾಣದಲ್ಲಿ ಯುವ ಜನರ‌ ಪಾತ್ರ ಮಹತ್ವವಾದುದು ಎಂದು ಅವರು ಹೇಳಿದರು. ಭ್ರಷ್ಟರನ್ನು ಸಮಾಜದಲ್ಲಿ ಬಹಿಷ್ಕರಿಸ ಬೇಕು. ಮನುಷ್ಯನಿಗೆ ತೃಪ್ತಿ ಇರಬೇಕು ದುರಾಸೆ ಬಿಡಬೇಕು. ಮಾನವೀಯ ಮೌಲ್ಯಗಳು ಇದ್ದಾಗ ಬದಲಾವಣೆ ಸಾಧ್ಯ. ಎಂದು ಅವರು ಹೇಳಿದರು.
ಪೂರ್ವ ವಲಯಾಧ್ಯಕ್ಷ ರಾಜೇಂದ್ರ ಭಟ್ ರಜತ ರಶ್ಮಿ-ಸಾಧನೆಯ ಹಾದಿಯಲ್ಲಿ ಬೆಳ್ಳಿ ಬೆಳಕು ವಿಷಯದಲ್ಲಿ ಸಮಾರೋಪ ಭಾಷಣ ಮಾಡಿದರು. ಶಿಸ್ತು ಬದ್ಧ, ಉತ್ತಮ ನಾಯಕರೊಂದಿಗೆ ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿ ಜನರ ಪ್ರೀತಿಗಳಿಸಿ 25 ವರ್ಷಗಳನ್ನು ಪೂರೈಸಿದ ಜೇಸಿಐ‌ ಪಂಜ ಪಂಚಶ್ರೀಯು ಅನೇಕ ಕೊಡುಗೆಗಳ ಮೂಲಕ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ ಎಂದು ಹೇಳಿದರು‌.
ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಶಿವಪ್ರಸಾದ್ ಹಾಲೆಮಜಲು ಅಧ್ಯಕ್ಷತೆ ವಹಿಸಿದ್ದರು.
ಜೇಸಿಐ ಪಂಜ ಪಂಚಶ್ರೀ ಪೂರ್ವಾಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ಯವರಿಗೆ ಕಮಲ ಪತ್ರ ಪುರಸ್ಕಾರ ನಡೆಯಿತು.
ವಲಯಾಧ್ಯಕ್ಷ ಜೇಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತ ಪುರಸ್ಕರಿಸಿದರು.ಪೂರ್ವ ವಲಯಾಧ್ಯಕ್ಷರಾದ ಚಂದ್ರಶೇಖರ ನಾಯರ್, ಅಶೋಕ್ ಚೂಂತಾರ್, ಚಂದ್ರಹಾಸ ರೈ, ಕೃಷ್ಣ ಮೋಹನ್, ಜೇಸಿಐ ಪಂಜ ಪಂಚಶ್ರೀ ಪೂರ್ವಾಧ್ಯಕ್ಷರಾದ ಶಶಿಧರ ಪಳಂಗಾಯ, ರಾಜೇಶ್ ರೈ, ಸಂತೋಷ್ ಜಾಕೆ, ಸೋಮಶೇಖರ ನೇರಳ, ಸುದರ್ಶನ ಪಟ್ಟಾಜೆ, ಗಣೇಶ್ ಪ್ರಸಾದ್ ನಾಯರ್,ಭರತ್ ನೆಕ್ರಾಜೆ, ರಾಜೇಶ್ ಕಂಬಳ,ಇಸ್ಮಾಯಿಲ್ ಪಡ್ಪಿನಂಗಡಿ, ದಯಪ್ರಸಾದ್ ಚೀಮುಳ್ಳು, ಜಯರಾಮ ಕಲ್ಲಾಜೆ, ಚಂದ್ರಶೇಖರ ಇಟ್ಯಡ್ಕ, ಚಂದ್ರಶೇಖರ ಕುಕ್ಕುಪುಣಿ, ಪುರುಷೋತ್ತಮ ದಂಬೆಕೋಡಿ, ಚೇತನ್ ತಂಟೆಪ್ಪಾಡಿ, ಗುರುಪ್ರಸಾದ್ ತೋಟ, ವಾಸುದೇವ ಮೇಲ್ಪಾಡಿ, ನಾಗ್ ಮಣಿ ಕೆದಿಲ ,ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಮತ್ತು ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಬೆಳ್ಳಿ ‌ಹಬ್ಬ ಸಮಿತಿಯ ಕಾರ್ಯದರ್ಶಿ ತೀರ್ಥಾನಂದ ಕೊಡೆಂಕಿರಿ, ಬೆಳ್ಳಿ ‌ಹಬ್ಬ ಕಾರ್ಯಕ್ರಮ ನಿರ್ದೇಶಕ ಲೋಕೇಶ್ ಆಕ್ರಿಕಟ್ಟೆ, ಘಟಕದ ನಿಕಟ ಪೂರ್ವಾಧ್ಯಕ್ಷ ಗಣೇಶ್ ಪ್ರಸಾದ್ ಭೀಮಗುಳಿ, ಕಾರ್ಯದರ್ಶಿ ಕೌಶಿಕ್ ಕುಳ ವೇದಿಕೆಯಲ್ಲಿ .

ಉಪಸ್ಥಿತರಿದ್ದರು. ವಲಯಾಧ್ಯಕ್ಷ ಜೇಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತರವರನ್ನು,ಪೂರ್ವಾಧ್ಯಕ್ಷರುಗನ್ನು ಸನ್ಮಾನಿಸಿ ಗೌರವಿಸಲಾಯಿತು.ಇದೇ ವೇಳೆ ಘಟಕಕ್ಕೆ ವಲಯದ ಮತ್ತು ರಾಷ್ಟ್ರೀಯ ಪುರಸ್ಕಾರವನ್ನು ನೀಡಿದರು. ಯುವ ತೇಜಸ್ಸು ಟ್ರಸ್ಟ್ ಪಂಜ, ಶಾರದಾಂಬ ಭಜನಾ ಮಂಡಳಿ ಪಂಜ, ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಗಳಿಗೆ ಪುರಸ್ಕಾರ ನೀಡಲಾಯಿತು.
ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಂಚಶ್ರೀ ವಿದ್ಯಾನಿಧಿ ವಿತರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಜೀವನ್ ಶೆಟ್ಟಿ ಗದ್ದೆ ವೇದಿಕೆಗೆ ಆಹ್ವಾನಿಸಿದರು.ದುರ್ಗದಾಸ್ ಕಡ್ಲಾರು ಜೇಸಿ ವಾಣಿ ನುಡಿದರು. ಸವಿತಾರ ಮುಡೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯರಾಮ ಕಲ್ಲಾಜೆ, ಗುರುಪ್ರಸಾದ್ ತೋಟ, ಶಶಿಧರ ಪಳಂಗಾಯ, ಚಂದ್ರಶೇಖರ ಇಟ್ಯಡ್ಕ, ಮಹೇಶ್ ಅಂಬೆಕಲ್ಲು, ಸೋಮಶೇಖರ ನೇರಳ ಅತಿಥಿಗಳ, ಪುರಸ್ಕೃತರ ಪರಿಚಯಿಸಿದರು.ಕೌಶಿಕ್ ಕುಳ ವಂದಿಸಿದರು.ಬಳಿಕ ಪ್ರತಿಷ್ಠಿತ ತಂಡಗಳ ಮುಕ್ತ ಡ್ಯಾನ್ಸ್ ಸ್ಪರ್ಧೆ ಸಿಲ್ವರ್ ಸ್ಟೆಪ್ಸ್ 2022 ನಡೆಯಿತು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ರಾಜ್ಯದ ವಿವಿಧ ಕಡೆ ಎರಡು ದಿನ ಮಳೆ ಸಾಧ್ಯತೆ: ಮೋಡ ಕವಿದ ವಾತಾವರಣ-ಹನಿ ಮಳೆಯ ಸಿಂಚನ.
next post
ಅರಂತೋಡಿನಲ್ಲಿ ತೆಕ್ಕಿಲ್ ಸೋಕರ್ 2022- ಪುಟ್ಬಾಲ್ ಲೀಗ್ ಪಂದ್ಯ ಉದ್ಘಾಟನೆ

You may also like

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಜೂ.7 ರಿಂದ ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆ...

June 6, 2023

ಕಲ್ಲುಗುಂಡಿ: ಸಂತೆ ಮಾರುಕಟ್ಟೆ ಸಂಕೀರ್ಣ ಲೋಕಾರ್ಪಣೆ

June 6, 2023

ಸಂಪಾಜೆ ಗ್ರಾಮದ ಮೂಲಭೂತ ಅಭಿವೃದ್ಧಿಗಾಗಿ ಹೋರಾಟ: ಸಂಪಾಜೆ ಮೂಲಭೂತ ಸೌಕರ್ಯಗಳ...

June 6, 2023

ಕಲ್ಲುಗುಂಡಿ: ಬರೆಯುವ ಪುಸ್ತಕ ವಿತರಣೆ, ಸನ್ಮಾನ

June 4, 2023

ಜೂ.10ರಂದು ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಮಾಜಿ ಸಚಿವ...

June 3, 2023

ಸೋಣಂಗೇರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳ ಕೊಡುಗೆ

June 2, 2023

ದ.ಕ. ಸಂಪಾಜೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ: ಪ್ರಳಯ ಬಾದಿತ...

June 2, 2023

ಗೂನಡ್ಕ ತೆಕ್ಕಿಲ್ ಶಾಲಾ ಪ್ರಾರಂಭೋತ್ಸವ ಹಾಗೂ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ...

June 1, 2023

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಗಳಲ್ಲಿ ಶಾಲಾ ಪ್ರಾರಂಭೋತ್ಸವ

May 31, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಮಂಗಳೂರಿನಲ್ಲಿ ಮಳೆ
  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ