


ಸುಳ್ಯ: ಪ್ರತಿಷ್ಠಿತ ಜೇಸಿ ಸಂಸ್ಥೆ ಜೇಸಿಐ ಪಂಜ ಪಂಚಶ್ರೀ 25 ನೇ ವರ್ಷಾಚರಣೆಯ ರಜತ ಸಂಭ್ರಮ ‘ರಜತ ರಶ್ಮಿ’ ನ.7 ರಿಂದ 12 ರವರೆಗೆ ನಡೆಯಲಿದೆ. 6 ದಿನಗಳ ಕಾಲ ವಿವಿಧ ಕಲಾ, ಸಾಂಸ್ಕೃತಿಕ, ಕ್ರೀಡಾ ಹಾಗು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ನಡೆಯಲಿದೆ. ನ.7 ರಂದು ಪೂ.9.30ಕ್ಕೆ ಕಾರ್ಯಕ್ರಮದ ಉದ್ಘಾನೆ ಪಂಜ ಪಂಚಲಿಂಗೇಶ್ವರ ಸಭಾ ಭವನದಲ್ಲಿ ನಡೆಯಲಿದೆ. ಜೇಸಿಐ ವಲಯಾಧ್ಯಕ್ಷ ರೋಯನ್ ಉದಯ ಕ್ರಾಸ್ತಾ ಉದ್ಘಾಟಿಸುವರು. ವಲಯ ಉಪಾಧ್ಯಕ್ಷ ರವಿಚಂದ್ರ ಪಾಟಾಳಿ ಮುಖ್ಯ ಅತಿಥಿಯಾಗುವರು. ತಾರಾಲಯ ಉದ್ಘಾಟನೆ ಮತ್ತು ಉಪನ್ಯಾಸವನ್ನು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೆರವೇರಿಸುವರು.ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಅಪರೂಪದ ಸಾಕು ಪ್ರಾಣಿ-ಪಕ್ಷಿಗಳ ಪ್ರದರ್ಶನ ‘ಝೂ ಪೆಟ್ ಶೋ’ ವನ್ನು ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನಿತಿನ್ ಪ್ರಭು ಉದ್ಘಾಟಿಸುವರು.ವಲಯ ಅರಣ್ಯಾಧಿಕಾರಿ
ಎನ್.ಮಂಜುನಾಥ್ ಅತಿಥಿಯಾಗಿ ಭಾಗವಹಿಸುವರು. ನ.8 ರಂದು ಆಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ರಜತ ಟ್ರೋಫಿ-2022 ಪಂಜ ಸರಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ನ.9 ರಂದು ಬೆಳ್ಳಿ ಹಬ್ಬದ ಶಾಶ್ವತ ಯೋಜನೆ ಕದಿರು– ನೂತನ ಗದ್ದೆ ದೇವಳಕ್ಕೆ ಸಮರ್ಪಣೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಉದ್ಘಾಟಿಸುವರು. ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪದ್ಮನಾಭ ಅಗೋಳಿಬೈಲು, ಪೂರ್ವ ವಲಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ ಭಾಗವಹಿಸುವರು. ಬಳಿಕ ‘ಸರ್ವ ಋತು ತರಕಾರಿ ಬೆಳೆ’ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪ್ರಗತಿಪರ ಸರ್ವ ಋತು ಸಾವಯವ ತರಕಾರಿ ಬೆಳೆಗಾರ ರಾದ ಶಿವಪ್ರಸಾದ ವರ್ಮುಡಿ ಭಾಗವಹಿ ಸಲಿದ್ದಾರೆ . ‘ನಿಸರ್ಗದತ್ತ ಆಹಾರ’ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅರಂತೋಡು ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಸಸ್ಯ ಶಾಸ್ತ್ರಜ್ಞರು ಹಾಗೂ ವಿಶ್ರಾಂತ ಪ್ರಾಂಶುಪಾಲೆ ರಮಾ ವೈ.ಕೆ. ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ

ನಿಸರ್ಗದತ್ತ ಆಹಾರ ತಯಾರಿ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನಕ್ಕೆ ಮುಕ್ತ ಅವಕಾಶವಿದೆ. ಸಂಜೆ ಕ್ರಿಕೆಟ್ ಪಂದ್ಯಾಟ ಸಮಾರೋಪ ಸಮಾರಂಭವು ಕೋಟಿ ಚೆನ್ನಯ ಕ್ರೀಡಾಂಗಣ ಸರಕಾರಿ ಪದವಿ ಪೂರ್ವ ಕಾಲೇಜು ಪಂಜದಲ್ಲಿ ನಡೆಯಲಿದೆ. ನ.10 ಸಂಜೆ ಗಂಟೆ 6 ರಿಂದ ಅಂತರಾಷ್ಟ್ರೀಯ ಖ್ಯಾತಿಯ ಮೆಗಾ ವೆಜಿಷಿಯನ್ ಕುದ್ರೋಳಿ ಗಣೇಶ್ ಅವರಿಂದ ವಿಸ್ಮಯ ಜಾದೂ ಲೋಕದಲ್ಲೊಂದು ಪಯಣ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪಂಡಿತ್ ದೀನ ದಯಾಳ್ ಸಭಾಭವನದಲ್ಲಿ ನಡೆಯಲಿದೆ . ಸನ್ಮಾನ ಸಮಾರಂಭದಲ್ಲಿ ಹಿರಿಯ ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ ಸನ್ಮಾನ ಸ್ವೀಕರಿಸಲಿದ್ದಾರೆ . ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸೀತಾರಾಮ ರೈ ಸವಣೂರು ಸನ್ಮಾನಿಸಲಿದ್ದಾರೆ. ನ.11.ರಂದು ರಜತ ಚಿತ್ತಾರ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ . ಪೋಷಕರಿಗಾಗಿ ವಿಚಾರಗೋಷ್ಠಿ ಸೃಜನಶೀಲ ಬದುಕಿನಲ್ಲಿ ಚಿತ್ರಕಲೆ ಎಂಬ ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೊಡಗು ಶಿಕ್ಷಣ ಚಿಂತಕ ಊ . ರಾ ನಾಗೇಶ್ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ ಬಹುಮಾನ ವಿತರಣಾ ಕಾರ್ಯಕ್ರಮವು ಜರುಗಲಿದೆ . ಸಂಜೆ ಗಂಟೆ 6 ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ಜರುಗಲಿದೆ .

ಕಾರ್ಯಕ್ರಮವನ್ನು ಮೀನುಗಾರಿಕೆ ಬಂದರು ಮತ್ತು ಒಳ ನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ. ರಜತ ರಥ ಸ್ಮರಣ ಸಂಚಿಕೆ ಮುಖಪುಟವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅನಾವರಣಗೊಳಿಸಲಿದ್ದಾರೆ . ನ.12 ರಂದು ಸಂಜೆ 6ರಿಂದ ಸಮಾರೋಪ ಸಮಾರಂಭವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ನಡೆಯಲಿದೆ . ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ‘ ಭವ್ಯ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ‘ಎಂಬ ವಿಷಯದಲ್ಲಿ ದಿಕೂಚಿ ಭಾಷಣ ಮಾಡಲಿದ್ದಾರೆ. ಪೂರ್ವ ವಲಯಾಧ್ಯಕ್ಷ ರಾಜೇಂದ್ರ ಭಟ್ ‘ ರಜತ ರಶ್ಮಿ ಸಾಧನೆಯ ಹಾದಿಯಲ್ಲಿ ಬೆಳ್ಳಿ ಬೆಳಕು ‘ ಎಂಬ ವಿಷಯದಲ್ಲಿ ಸಮಾರೋಪ ಭಾಷಣ ಮಾಡಲಿದ್ದಾರೆ. ಜೇಸಿಐ ಪಂಜ ಪಂಚಶ್ರೀ ಪೂರ್ವಾಧ್ಯಕ್ಷ ತೀರ್ಥಾನಂದ ಕೊಡಂಕಿರಿ ಕಮಲ ಪತ್ರ ಪುರಸ್ಕಾರ ಪಡೆಯಲಿದ್ದಾರೆ. ವಲಯಾಧ್ಯಕ್ಷ ಜೇಸಿಐ ಸೆನೆಟರ್ ರೋಯನ್ ಉದಯ ಕ್ರಾಸ್ತ ಪುರಸ್ಕರಿಸಲಿರುವರು.ಜೇಸಿಐ ವಲಯ 15 ರ ಪೂರ್ವ ವಲಯ ಅಧ್ಯಕ್ಷರುಗಳು ಉಪಸ್ಥಿತರಿರುವರು. ಯುವ ತೇಜಸ್ಸು ಟ್ರಸ್ಟ್ ಪಂಜ , ಶಾರದಾಂಬ ಭಜನಾ ಮಂಡಳಿ ಪಂಜ , ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಗಳಿಗೆ ಪುರಸ್ಕಾರ ನಡೆಯಲಿದೆ . ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಂಚಶ್ರೀ ವಿದ್ಯಾನಿಧಿ ವಿತರಣೆ ನಡೆಯಲಿದೆ. ಬಳಿಕ ಪ್ರತಿಷ್ಠಿತ ತಂಡಗಳ ಮುಕ್ತ ಡ್ಯಾನ್ಸ್ ಸ್ಪರ್ಧೆ ಸಿಲ್ವರ್ ಸ್ಟೆಪ್ಸ್ 2022 ನಡೆಯಲಿದೆ ಎಂದು ಜೇಸಿಐ ಪಂಜ ಪಂಚಶ್ರೀಯ ಅಧ್ಯಕ್ಷ ಶಿವಪ್ರಸಾದ್ ಹಾಲೆಮಜಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.