ಸುಳ್ಯ:ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಮಿತ ಪುತ್ತೂರು ಇದರ ವಾರ್ಷಿಕ ಮಹಾಸಭೆಯು ಮಾಧುರಿ ಸೌಧ ಸಭಾಂಗಣ ಪುತ್ತೂರುನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ಅಧ್ಯಕ್ಷತೆ ವಹಿಸಿದ್ದರು.2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ 1.16ಲಕ್ಷ ಕೆ.ಜಿ ಜೇನು ಮಾರಾಟ ಮಾಡಲಾಗಿದೆ. ಸಂಸ್ಥೆಯು
97.22 ಲಕ್ಷ ಲಾಭ ಗಳಿಸಿದೆ, ರೂ.20.31ಲಕ್ಷ ನಿವ್ವಳ ಲಾಭ ಗಳಿಸಲಾಗಿದೆ. ಒಟ್ಟು ವ್ಯವಹಾರ ರೂ 40.11 ಕೋಟಿ ಆಗಿರುತ್ತೆದೆ. ಸಂಸ್ಥೆಯಿಂದ ಶೇ.20 ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.ಮುಖ್ಯ ಕಾರ್ಯನಿರ್ವಣಾಧಿಕಾರಿ ತಿಮ್ಮಯ್ಯ ಪಿ ವರದಿ ವಾಚಿಸಿದರು. ದಕ್ಷಿತಾ ಬಿ. ಕೆ ಪ್ರಾರ್ಥನೆ ಹಾಡಿದರು.
ಅತೀ ಹೆಚ್ಚು ಜೇನು ಮಾರಾಟ ಮಾಡಿದ ಜೇನು ಕೃಷಿಕರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕರ್ನಾಟಕ ರಾಜ್ಯ ರೈತ ಉತ್ಪದಕರ ಸಂಸ್ಥೆಗಳ ಸಹಕಾರ ಸಂಘ ಮಹಾ ಮಂಡಲ ಬೆಂಗಳೂರು ಇದರ ನಿರ್ದೇಶಕರಾದ ವೀರಪ್ಪ ಗೌಡರಿಗೆ ರವರನ್ನು ಸನ್ಮಾನಿಸಿದರು. ಸಂಸ್ಥೆಯಿಂದ ನಿವೃತ್ತಿ ಹೊಂದಿದ ಆಶಾ ಇವರನ್ನು ಸನ್ಮಾನಿಸಲಾಯಿತು. ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ನಿರ್ದೇಶಕರಾದ ಜಿ. ಪಿ. ಶ್ಯಾಮ ಭಟ್, ಜನಾರ್ದನ ಚೂoತಾರು, ಡಿ. ತನಿಯಪ್ಪ, ಶ್ರೀಶ ಕೊಡುವೂರು, ಎಚ್. ಸುಂದರ ಗೌಡ, ಇಂದಿರಾ.ಕೆ, ಹರೀಶ್ ಕೋಡ್ಲ, ಪಾಂಡುರಂಗ ಹೆಗ್ಡೆ, ಪುರುಷೋತ್ತಮ ಭಟ್ ಎಂ., ಶಿವಾನಂದ, ಮೋಹನ ಎ, ಪುಟ್ಟಣ್ಣ ಗೌಡ ಕೆ, ಗೋವಿಂದ ಭಟ್ ಪಿ, ಶಂಕರ ಪೆರಾಜೆ, ಸರಸ್ವತಿ ವೈ. ಪಿ, ಸುಶೀಲ, ಮೊದಲಾದವರು ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ರಾಜಾರಾಮ್ ಶೆಟ್ಟಿ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.












