ಸುಳ್ಯ:ಗ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನಕಾರಿಯಾಗಲಿ ಎಂಬ ನೆಲೆಯಲ್ಲಿ ಬೃಹತ್ ಉದ್ಯೋಗ ಮೇಳ ನ.26 ರಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆವಿಜಿ ವಿದ್ಯಾಸಂಸ್ಥೆಗಳು ಹಾಗು ವಿವಿಧ ಸರಕಾರಿ
ಇಲಾಖೆಗಳ ಸಹಕಾರದಲ್ಲಿ ಮಂಗಳೂರಿನ ಕರಿಯರ್ ಡೆಸ್ಟಿನಿ ಸಂಸ್ಥೆಯ ನೇತೃತ್ವದಲ್ಲಿ ಸುಳ್ಯದಲ್ಲಿ ಎರಡನೇ ಬಾರಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುತಿದೆ. ವಿವಿಧ ರೀತಿಯ ಉದ್ಯೋಗ ಬಯಸುವವರಿಗೆ, ಎಲ್ಲಾ ಶೈಕ್ಷಣಿಕ ಯೋಗ್ಯತೆ ಇರುವವರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸರಕಾರದ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತಿತರ ಸರಕಾರಿ ಇಲಾಖೆಗಳ ಸಹಕಾರವನ್ನು ಉದ್ಯೋಗ ಮೇಳಕ್ಕೆ ಪಡೆಯಲಾಗುವುದು. ಈ ನಿಟ್ಟಿನಲ್ಲಿ 16 ರಂದು ಇಲಾಖೆಗಳ ಸಭೆ ಕರೆಯಲಾಗಿದೆ.ವಿದ್ಯಾವಂತರು ಈ ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಉದ್ಯೋಗ ಮೇಳ ಸಂಘಟಿಸುವ ನೇತತ್ವ ವಹಿಸುವ ಕೆರಿಯರ್ ಡೆಸ್ಟಿನಿ ಸಂಸ್ಥೆಯ ಮುಖ್ಯಸ್ಥೆ ಜಯಶ್ರೀ ಮಾತನಾಡಿ ‘ಉದ್ಯೋಗ ಮೇಳದಲ್ಲಿ ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ.
ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ 50 ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಪ್ರತಿಷ್ಠಿತ ಕಂಪೆನಿಗಳ ಜೊತೆಗೆ ಜಿಲ್ಲೆಯ ಹಾಗು ಸ್ಥಳೀಯ ಕಂಪೆನಿಗಳು ಕೂಡ ಭಾಗವಹಿಸಲಿದೆ. ಹೆಚ್ಚು ಕಂಪೆನಿಗಳು ಹಾಗು ಉದ್ಯೋಗಾರ್ಥಿಗಳನ್ನು ನಿರೀಕ್ಷಿಸಲಾಗುತಿದೆ. ಯಾವುದೇ ಕಂಪನಿಗಳು ಉದ್ಯೋಗ ಮೇಳವನ್ನು ನೋಂದಾಯಿಸಲು ಬಯಸಿದರೆ ವಸತಿ/ಸಾರಿಗೆ ಮತ್ತು ಆಹಾರ ನೀಡಲಾಗುವುದು. ಉದ್ಯೋಗ ಬಯಸಿ ಎಸ್ಎಸ್ಎಲ್ಸಿ, ಪಿಯುಸಿ ಆದವರು, ವಿವಿಧ ಪದವಿ, ಸ್ನಾತಕೋತ್ತರ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ಪದವೀಧರರು ಭಾಗವಹಿಸಬಹುದು. ಯಾವುದೇ ಉಚಿತವಾಗಿ ನೊಂದಾವಣೆ ಶುಲ್ಕ ಇಲ್ಲದೆ ಉಚಿತವಾಗಿ ಮಾಡಿಸಿಕೊಳ್ಳಬಹುದು. ಉದ್ಯೋಗ ಮೇಳಕ್ಕೆ ಆಗಮಿಸುವವರು 10 ಪ್ರತಿ ಬಯೋಡಾಟ ತರಬೇಕು. ಸ್ಥಳದಲ್ಲಿಯೇ ನೋಂದಾವಣೆ ಮಾಡಿಸಿಕೊಳ್ಳಬಹುದು ಎಂದು ಅವರು ಹೇಳಿದರು.ಹೆಚ್ಚಿನ ಮಾಹಿತಿಗಾಗಿ ಕೆರಿಯರ್ ಡೆಸ್ಟಿನಿ ಮಂಗಳೂರು ಸಂಪರ್ಕಿಸಬಹುದು ಎಂದು
(7338676611) ಅವರು ತಿಳಿಸಿದ್ದಾರೆ.
ನೆಹರೂ ಸ್ಮಾರಕ ಮಹಾವಿದ್ಯಾಲುದ ಪ್ರಾಂಶುಪಾಲ ಎಂ.ಎಂ.ರುದ್ರಕುಮಾರ್ ಮಾತನಾಡಿ 2019 ರಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1500 ಕ್ಕೂ ಉದ್ಯೋಗಾರ್ಥಿಗಳು ಭಾಗವಹಿಸಿದ್ದರು.ಆ ಸಂದರ್ಭದಲ್ಲಿ 400 ಕ್ಕೂ ಹೆಚ್ಚು ಮಂದಿಗೆ ವಿವಿಧ ಕಂಪೆನಿಗಳಲ್ಲಿ ಉದ್ಯೋಗ ಲಭಿಸಿದೆ. ಈ ಬಾರಿಯೂ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಸುಬೋದ್ ಶೆಟ್ಟಿ ಮೇನಾಲ, ಸುನಿಲ್ ಕೇರ್ಪಳ, ಕೆರಿಯರ್ ಡೆಸ್ಟಿನಿ ಸಂಸ್ಥೆಯ ಅಕ್ಷತಾ ಉಪಸ್ಥಿತರಿದ್ದರು.