The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ನ.26ರಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಕ್ಕೂ ಹೆಚ್ಚು ಕಂಪೆನಿಗಳು ಆಗಮಿಸುವ ನಿರೀಕ್ಷೆ: ಸಚಿವ ಎಸ್.ಅಂಗಾರ

by ದಿ ಸುಳ್ಯ ಮಿರರ್ ಸುದ್ದಿಜಾಲ November 12, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 12, 2022
Share this article

ಸುಳ್ಯ:ಗ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನಕಾರಿಯಾಗಲಿ ಎಂಬ ನೆಲೆಯಲ್ಲಿ ಬೃಹತ್ ಉದ್ಯೋಗ ಮೇಳ ನ.26 ರಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆವಿಜಿ ವಿದ್ಯಾಸಂಸ್ಥೆಗಳು ಹಾಗು ವಿವಿಧ ಸರಕಾರಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಇಲಾಖೆಗಳ ಸಹಕಾರದಲ್ಲಿ ಮಂಗಳೂರಿನ ಕರಿಯರ್ ಡೆಸ್ಟಿನಿ ಸಂಸ್ಥೆಯ ನೇತೃತ್ವದಲ್ಲಿ ಸುಳ್ಯದಲ್ಲಿ ಎರಡನೇ ಬಾರಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುತಿದೆ. ವಿವಿಧ ರೀತಿಯ ಉದ್ಯೋಗ ಬಯಸುವವರಿಗೆ, ಎಲ್ಲಾ ಶೈಕ್ಷಣಿಕ ಯೋಗ್ಯತೆ ಇರುವವರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸರಕಾರದ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತಿತರ ಸರಕಾರಿ ಇಲಾಖೆಗಳ ಸಹಕಾರವನ್ನು ಉದ್ಯೋಗ ಮೇಳಕ್ಕೆ ಪಡೆಯಲಾಗುವುದು. ಈ ನಿಟ್ಟಿನಲ್ಲಿ 16 ರಂದು ಇಲಾಖೆಗಳ ಸಭೆ ಕರೆಯಲಾಗಿದೆ.ವಿದ್ಯಾವಂತರು ಈ ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಉದ್ಯೋಗ ಮೇಳ ಸಂಘಟಿಸುವ ನೇತತ್ವ ವಹಿಸುವ ಕೆರಿಯರ್ ಡೆಸ್ಟಿನಿ ಸಂಸ್ಥೆಯ ಮುಖ್ಯಸ್ಥೆ ಜಯಶ್ರೀ ಮಾತನಾಡಿ ‘ಉದ್ಯೋಗ ಮೇಳದಲ್ಲಿ ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ.
ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ 50 ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಪ್ರತಿಷ್ಠಿತ ಕಂಪೆನಿಗಳ ಜೊತೆಗೆ ಜಿಲ್ಲೆಯ ಹಾಗು ಸ್ಥಳೀಯ ಕಂಪೆನಿಗಳು ಕೂಡ ಭಾಗವಹಿಸಲಿದೆ. ಹೆಚ್ಚು ಕಂಪೆನಿಗಳು ಹಾಗು ಉದ್ಯೋಗಾರ್ಥಿಗಳನ್ನು ನಿರೀಕ್ಷಿಸಲಾಗುತಿದೆ. ಯಾವುದೇ ಕಂಪನಿಗಳು ಉದ್ಯೋಗ ಮೇಳವನ್ನು ನೋಂದಾಯಿಸಲು ಬಯಸಿದರೆ ವಸತಿ/ಸಾರಿಗೆ ಮತ್ತು ಆಹಾರ ನೀಡಲಾಗುವುದು. ಉದ್ಯೋಗ ಬಯಸಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಆದವರು, ವಿವಿಧ ಪದವಿ, ಸ್ನಾತಕೋತ್ತರ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ಪದವೀಧರರು ಭಾಗವಹಿಸಬಹುದು‌. ಯಾವುದೇ ಉಚಿತವಾಗಿ ನೊಂದಾವಣೆ ಶುಲ್ಕ ಇಲ್ಲದೆ ಉಚಿತವಾಗಿ ಮಾಡಿಸಿಕೊಳ್ಳಬಹುದು. ಉದ್ಯೋಗ ಮೇಳಕ್ಕೆ ಆಗಮಿಸುವವರು 10 ಪ್ರತಿ ಬಯೋಡಾಟ ತರಬೇಕು. ಸ್ಥಳದಲ್ಲಿಯೇ ನೋಂದಾವಣೆ ಮಾಡಿಸಿಕೊಳ್ಳಬಹುದು ಎಂದು ಅವರು ಹೇಳಿದರು.ಹೆಚ್ಚಿನ ಮಾಹಿತಿಗಾಗಿ ಕೆರಿಯರ್ ಡೆಸ್ಟಿನಿ ಮಂಗಳೂರು ಸಂಪರ್ಕಿಸಬಹುದು ಎಂದು
(7338676611) ಅವರು ತಿಳಿಸಿದ್ದಾರೆ.

ನೆಹರೂ ಸ್ಮಾರಕ ಮಹಾವಿದ್ಯಾಲುದ ಪ್ರಾಂಶುಪಾಲ ಎಂ.ಎಂ.ರುದ್ರಕುಮಾರ್ ಮಾತನಾಡಿ 2019 ರಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1500 ಕ್ಕೂ ಉದ್ಯೋಗಾರ್ಥಿಗಳು ಭಾಗವಹಿಸಿದ್ದರು.ಆ ಸಂದರ್ಭದಲ್ಲಿ 400 ಕ್ಕೂ ಹೆಚ್ಚು ಮಂದಿಗೆ ವಿವಿಧ ಕಂಪೆನಿಗಳಲ್ಲಿ ಉದ್ಯೋಗ ಲಭಿಸಿದೆ. ಈ ಬಾರಿಯೂ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ, ಬಿಜೆಪಿ ಮಂಡಲ‌ ಸಮಿತಿ‌ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಸುಬೋದ್ ಶೆಟ್ಟಿ ಮೇನಾಲ, ಸುನಿಲ್ ಕೇರ್ಪಳ, ಕೆರಿಯರ್ ಡೆಸ್ಟಿನಿ ಸಂಸ್ಥೆಯ ಅಕ್ಷತಾ ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಮುಖ್ಯಮಂತ್ರಿಗಳಿಂದ 19ರಂದು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ: ಪೂರ್ವಭಾವಿ ಸಭೆ
next post
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ‘ಸ್ವಸ್ತಿಕ್ ಶ್ರೀ’ ರಾಜ್ಯ ಪ್ರಶಸ್ತಿ

You may also like

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ...

June 8, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

ಸಂಪಾಜೆ ಗ್ರಾಮದ ಮೂಲಭೂತ ಅಭಿವೃದ್ಧಿಗಾಗಿ ಹೋರಾಟ: ಸಂಪಾಜೆ ಮೂಲಭೂತ ಸೌಕರ್ಯಗಳ...

June 6, 2023

ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಉಚಿತ ವಿದ್ಯುತ್: ಸಿಎಂ ಸಿದ್ದರಾಮಯ್ಯ

June 6, 2023

200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಮಾರ್ಗಸೂಚಿ...

June 5, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ
  • ನಗರ ಸ್ವಚ್ಛತಾ ಅಭಿಯಾನ: ಆಲೆಟ್ಟಿ ರಸ್ತೆಯಲ್ಲಿ 37ನೇ ವಾರದ ಸ್ವಚ್ಛತಾ ಕಾರ್ಯಕ್ರಮ
  • ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
  • ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ ಸನ್ಮಾನ
  • ಹನಿ‌ ಸುರಿಸಿ ಮಾಯವಾದ ವರುಣ: ಮುಂದುವರಿದ ಮಳೆಯ ಕಣ್ಣಾ ಮುಚ್ಚಾಲೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ