ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ ಮೂಲ ಸ್ಥಾನದಲ್ಲಿ ಶ್ರೀ ಕಾಚುಕುಜುಂಬ ದೈವದ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಕಲಶ ಡಿ.5ರಂದು ನಡೆಯಿತು. ಕ್ಷೇತ್ರದ ತಂತ್ರಿ ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ 3 ದಿನಗಳ ಕಾಲ ನಡೆದ

ಪ್ರತಿಷ್ಠಾ ಉತ್ಸವದಲ್ಲಿ ಡಿ. 5 ರಂದು ಪೂ. 10: 29ರಿಂದ 11:30ರ ತನಕದ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠೆ ಭಕ್ತಿ ನಡೆಯಿತು.
ಪೂರ್ವಾಹ್ನ ಮಹಾಗಣಪತಿ ಹೋಮ, ಕಲಶ ಪೂಜೆ , ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ , ತಂಬಿಲ ಸೇವೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ಕಾಚು ಕುಜುಂಬ ದೈವಸ್ಥಾನದ

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪರಮೇಶ್ವರ ಬಿಳಿಮಲೆ, ಕಾರ್ಯದರ್ಶಿ ಆನಂದ ಗೌಡ ಜಳಕದಹೊಳೆ,ಉಪಾಧ್ಯಕ್ಷ ಉಮೇಶ್ ಬುಡೆಂಗಿ ಬಳ್ಪ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ ಕಾಯಂಬಾಡಿ, ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಪವಿತ್ರ ಮಲ್ಲೆಟಿ, ಮಾಲಿನಿ ಕುದ್ವ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ, ಉದಯ ಕುಮಾರ್ ಬೆಟ್ಟ, ಮಹಿಳಾ ಒಕ್ಕೂಟದ ಅಧ್ಯಕ್ಷೆ ಪುಷ್ಪ ಡಿ ಪ್ರಸಾದ್, ಸೇರಿದಂದೆ ನೂರಾರು ಮಂದಿ ಸೀಮೆಯ ಭಕ್ತೆಉ ಭಾಗವಹಿಸಿದ್ದರು.














