ಸುಳ್ಯ:ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಂಗ್ರೆಸ್ ಮುಖಂಡ, ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಹಾಗೂ ಕಾಂಗ್ರೆಸ್ ಮುಖಂಡರು ಡಯಾಲಿಸಿಸ್ ಕೇಂದ್ರದ ಕಾರ್ಯ ಚಟುವಟಿಕೆಗಳನ್ನು ವೀಕ್ಷಣೆ ಮಾಡಿದರು. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ
3 ಡಯಾಲಿಸಿಸ್ ಮೆಷಿನ್ ಅಳವಡಿಸಲಾಗಿದೆ. 3 ಯಂತ್ರಗಳಿಂದ ಪ್ರತಿ ದಿನ 6 ಮಂದಿಗೆ ಡಯಾಲಿಸಿಸ್ ಮಾಡಬಹುದಾಗಿದೆ. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅತೀ ಅಗತ್ಯವಾಗಿದ್ದ ಡಯಾಲಿಸಿಸ್ ಮೆಷಿನ್ ಅಳವಡಿಸಿದ ಕರ್ನಾಟಕ ಸರಕಾರಕ್ಕೆ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಜಿ.ಕೃಷ್ಣಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಆದಂ ಕಡಬ, ದೀಕ್ಷಿತ್, ಶರತ್, ರಂಜಿತ್, ಹನೀಫ, ಶರೀಫ್ ಮತ್ತಿತರರು ಇದ್ದರು.