ಸುಳ್ಯ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂದು ಬಂಟಮಲೆ ಅಕಾಡೆಮಿ ಅಧ್ಯಕ್ಷ ಎ. ಕೆ. ಹಿಮಕರ ಹೇಳಿದರು.
ಅವರು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ
ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಸರಣಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಸುಳ್ಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಶುಭಹಾರೈಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ , ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಸಂಸ್ಥೆಯ ಹಿರಿಯ ಶಿಕ್ಷಕರಾದ ವಸಂತ್ ಕುಮಾರ್ ನಾಯಕ್ ಉಪಸ್ಥಿತರಿದ್ದರು.
ಭಾವನ ಸುಗಮ ಸಂಗೀತ ಬಳಗದ ಶ್ರೀ. ಕೆ. ಆರ್. ಗೋಪಾಲಕೃಷ್ಣ ಹಾಗೂ ಗಾಯಕಿ ಲಿಪಿಶ್ರೀ ಇವರಿಂದ ಪರಿಸರ ಗೀತಾ ಗಾಯನ ನಡೆಯಿತು.ಭಾಷಣ ಸ್ಪರ್ಧೆಯ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕ ಮುರಳೀಧರ ಪುನ್ಕುಟಿ ಸಹಕರಿಸಿದರು. ತೇಜಸ್ವಿ ಕಡಪಳ ಸ್ವಾಗತಿಸಿ, ಶಿಕ್ಷಕರಾದ ವಸಂತ್ ಕುಮಾರ್ ನಾಯಕ್ ವಂದಿಸಿದರು. ಕಸಾಪ ನಿರ್ದೇಶಕಿ ಹಾಗೂ ಕಾರ್ಯಕ್ರಮದ ಸಂಚಾಲಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.














