ಸುಳ್ಯ:ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ “ಕಲಾಕಾರ್ 2025” ಅಮರಶ್ರೀ ಭಾಗ್ನ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಡಾ. ಕೆ.ಎನ್. ಸುಬ್ರಮಣ್ಯ, ಪ್ರಾಂಶುಪಾಲ, ಆರ್.ವಿ. ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ಇವರು ವಹಿಸಿದ್ದರು.ಡಾ. ಶಿವಕುಮಾರ್ ಹೆಚ್.ಆರ್, ನಿವೃತ್ತ ರೀಜನಲ್ ಡೈರೆಕ್ಟರ್, ವಿ.ಟಿ.ಯು. ಬೆಳಗಾವಿ ಹಾಗೂ
ನಿವೃತ್ತ ಉಪಪ್ರಾಂಶುಪಾಲ ಮತ್ತು ಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥರು, ಕೆ.ವಿ.ಜಿ.ಸಿ.ಇ. ಅತಿಥಿಯಾಗಿದ್ದರು. ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ., ಸುಳ್ಯ ಇವರು ಡಾ. ಶಿವಕುಮಾರ್ ಹೆಚ್. ಆರ್. ಅವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.ವಿ.ಟಿ.ಯು. ಬೆಳಗಾವಿ ಇದರ ಎಕ್ಸೆಕ್ಯುಟಿವ್ ಕೌನ್ಸಿಲ್ ಸದಸ್ಯರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಉಜ್ವಲ್ ಯು.ಜೆ. ಮಾತನಾಡಿ ಶುಭ ಹಾರೈಸಿದರು.
ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಈ ವರ್ಷದ ಕಾಲೇಜಿನ ಸಂಶೋಧನಾ ಕೇಂದ್ರದಲ್ಲಿ ಪಿ.ಹೆಚ್.ಡಿ. ಪದವಿ ಪಡೆದ ಡಾ.ಬಾಲಪ್ರದೀಪ್ ಕೆ.ಎನ್. ಮತ್ತು ಡಾ. ದಿವ್ಯ ಎ.ಕೆ. ಅವರನ್ನು ಶಾಲು ಹೊದಿಸಿ ಅಭಿನಂದಿಸಲಾಯಿತು. ಎಂ.ಟೆಕ್.ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ 2ನೇ ರ್ಯಾಂಕ್ ಪಡೆದ ಫರಾನ ಐ.ಎಂ, 3ನೇ ರ್ಯಾಂಕ್ ಪಡೆದ ಲಿಖಿತ ಎ.ಬಿ. ಮತ್ತು ಎಂ.ಟೆಕ್. ಕನ್ಸ್ಟ್ರಕ್ಷನ್ ಟೆಕ್ನಾಲಜಿ (ಸಿವಿಲ್ ಇಂಜಿನಿಯರಿಂಗ್) ವಿಭಾಗದಲ್ಲಿ 4ನೇ ರ್ಯಾಂಕ್ ಪಡೆದ ಶ್ರೀದೇವಿ ಎಂ.ಎನ್. ಹಾಗೂ ಅಥ್ಲೆಟಿಕ್ಸ್ನಲ್ಲಿ ಸಾಧನೆಗೈದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಟಿಷನ್ ಮಾದಪ್ಪ,ರೇಶ್ಮಾ ಡಿ., ಮಂಜುನಾಥ್ ಕೆ, ವಿಘ್ನೇಶ್ ಪಿ. ಹಾಗೂ ರಕ್ಷಿತಾ ಪಿ. ಅವರನ್ನು ಸನ್ಮಾನಿಸಲಾಯಿತು. ವಿ.ಟಿ.ಯು. ಬೆಳಗಾವಿ ಇದರ ಕಾರ್ಯಕಾರಿ ಮಂಡಳಿ ಹಾಗೂ ವಿವಿಧ ಸಮಿತಿಗಳಿಗೆ ನೇಮಕಗೊಂಡು ಪ್ರಸಕ್ತ ಸಾಲಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿನ ಪ್ರಾಧ್ಯಾಪಕರುಗಳಾದ ಡೀನ್-ಅಕಾಡೆಮಿಕ್ ಡಾ. ಪ್ರಜ್ಞಾ ಎಂ.ಆರ್., ಕೋಆರ್ಡಿನೇಟರ್ ಡಾ.ಲೇಖ ಬಿ.ಎಂ.ಮತ್ತು ಡಾ. ಕುಸುಮಾಧರ ಎಸ್., ವಿಭಾಗ ಮುಖ್ಯಸ್ಥರು, ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಇವರಿಗೆ ಸನ್ಮಾನಿಸಲಾಯಿತು. 2025ನೇ ಸಾಲಿನ ಪದವಿ ಪೂರ್ಣಗೊಳಿಸಿದ ಅತ್ಯುತ್ತಮ ಹೊರಹೋಗುವ ವಿದ್ಯಾರ್ಥಿಗಳಿಗೆ ಕೊಡಮಾಡುವ ಪ್ರಶಸ್ತಿಯನ್ನು ವಿತರಿಸಲಾಯಿತು. ಕ್ರೀಡಾ ಚಟುವಟಿಕೆ, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಚಟುವಟಿಕೆ ಹಾಗೂ ಪ್ರಾಜೆಕ್ಟ್ ಎಕ್ಸ್ಪೋದ ಪ್ರತಿಭಾಶಾಲಿಗಳಿಗೆ ಪ್ರಶಸ್ತಿಯನ್ನು ವಿತರಿಸಲಾಯಿತು. ಪ್ರಾರ್ಥನೆಯನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊ.ಕೃಷ್ಣರಾಜ್ ಮತ್ತು ತಂಡ ನಡೆಸಿಕೊಟ್ಟರು, ಶ್ಯಾವ್ಯ ಆರ್. ರೈ ಸ್ವಾಗತಿಸಿ, ನಿಶ್ಮಿತಾ ವಂದಿಸಿದರು.ಈ ವಾಗ್ದೇವಿ ಹಾಗೂ ಲಿಖಿತ್ ಪಿ.ಪಿ. ನಿರೂಪಿಸಿದರು.ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.