ಕಳಂಜ:ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಅಜಿತ್ ರಾವ್ ಕಿಲಂಗೋಡಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಹರ್ಷ ಜೋಗಿಬೆಟ್ಟು ಆಯ್ಕೆಯಾಗಿದ್ದಾರೆ.ಒಟ್ಟು 13 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಸಹಕಾರ ಭಾರತಿಯ ಅಭ್ಯರ್ಥಿಗಳು ಪಡೆದಿದ್ದರು. ಅಧ್ಯಕ್ಷ ಸ್ಥಾನಕ್ಕೆ ಅಜಿತ್ ರಾವ್ ಕಿಲಂಗೋಡಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹರ್ಷ ಜೋಗಿಬೆಟ್ಟು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ
ಅವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಭಾಗವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ತಡಗಜೆ ಮತ್ತು ಸಿಬ್ಬಂದಿಗಳು ಸಹಕರಿಸಿದರು. ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸಂಘದ ನಿರ್ದೇಶಕರಾದ ಶುಭ ಕುಮಾರ್ ಬಾಳೆಗುಡ್ಡೆ, ಪಂಕಜಾಕ್ಷಿ ಮರುವಂಜ, ರವೀಂದ್ರ ರೈ ಟಪ್ಪಾಲುಕಟ್ಟೆ, ರಾಮಪ್ರಸಾದ ಕಾಂಚೋಡು, ಬಿ. ಪ್ರಭಾಕರ ಆಳ್ವ ಬಜನಿಗುತ್ತು, ಸರಿತಾ ಕಂಡಿಕಟ್ಟ, ರಾಮಣ್ಣ ಪರವ ಬಾಳಿಲ, ರವಿಪ್ರಸಾದ್ ರೈ ಕಳಂಜ, ಪ್ರಶಾಂತ್ ಕುಮಾರ್ ಕಿಲಂಗೋಡಿ, ಪ್ರಮುಖರಾದ ಶ್ರೀನಾಥ್ ರೈ ಬಾಳಿಲ, ಪುಷ್ಪಾವತಿ ಬಾಳಿಲ ಮತ್ತಿತರರು ಉಪಸ್ಥಿತರಿದ್ದರು.