ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲುಗುಂಡಿ ಪೇಟೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಲಯನ್ಸ್ ಕ್ಲಬ್ ಜಂಟಿ ಅಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪ್ರಸ್ತಾವಿಕವಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಮಾತನಾಡಿ ಸ್ವಚ್ಛತಾ ಕಾರ್ಯಕ್ರಮ ನಡೆಸಬೇಕಾದ ರೂಪುರೇಷೆಗಳ ಬಗ್ಗೆ ವಿವರಣೆ
ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಸ್ವಾಗತಿಸಿದರು. ನಿವೃತ ಸೈನಿಕರಾದ ಕೆ. ಪಿ. ಜಗದೀಶ್ ಮಾತನಾಡಿ ಸ್ವಚ್ಛತೆ ಪ್ರತಿಯೊಬ್ಬರ ಮನಸ್ಸಿನಲ್ಲಿ ಮೂಡಿದಾಗ ಮಾತ್ರ ಅರೋಗ್ಯವಂತ ಸಮಾಜ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಲಯನ್ಸ್ ಅಧ್ಯಕ್ಷ ಯೋಗಿಶ್ವರ್ ಸದಸ್ಯರುಗಳಾದ ಕಿಶೋರ್ ಕುಮಾರ್, ಇ.ವಿ. ಪ್ರಶಾಂತ್, ನಳಿನಿ ಕಿಶೋರ್, ನವೀನ್ ಚಂದ್ರ. ವಾಸುದೇವ ಕಟ್ಟಮನೆ ,ಗಿರೀಶ್, ಧನಲಕ್ಷ್ಮೀ, ಕಿಶೋರ್ ಸ್ಪಾಟ್ ಕಂಪ್ಯೂಟರ್,ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಗದೀಶ್ ರೈ, ಸುಂದರಿ ಮುಂಡಡ್ಕ, ಮಾಜಿ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರಾದ ವಿಮಲಾ ಪ್ರಸಾದ್, ಅನುಪಮಾ, ಸುಶೀಲ, ವಿಜಯ ಕುಮಾರ್, ಸಂಜೀವಿನಿ ಒಕ್ಕೂಟದ ಕಾಂತಿ ಬಿ. ಎಸ್. ಸೌಮ್ಯ, ಯಶೋದಾ. ಮಾಲತಿ,ಆಶಾ ಕಾರ್ಯಕರ್ತರುಗಳಾದ ಆಶಾ ವಿನಯ್, ಪ್ರೇಮಲತಾ, ಸೌಮ್ಯ, ಅಂಗನವಾಡಿ ಕಾರ್ಯಕರ್ತರಾದ ಧರ್ಮಕಲಾ ಇದ್ದರು. ಪಂಚಾಯತ್ ಕಾರ್ಯದರ್ಶಿ ಪದ್ಮಾವತಿ ಪ್ರತಿಜ್ಞಾ ವಿಧಿ ಬೋದಿಸಿದರು ಪಂಚಾಯತ್ ಸಿಬ್ಬಂದಿಗಳಾದ ಗೋಪಮ್ಮ. ಮಧುರ, ಭರತ್, ಸವಿತಾ, ಭೋಜಪ್ಪ, ಉಮೇಶ್ ಉಪಸ್ಥಿತರಿದ್ದರು. ಪಂಚಾಯತ್ ಉಪಾಧ್ಯಕ್ಷ ಎಸ್. ಕೆ ಹನೀಫ್ ವಂದಿಸಿದರು. ಬಳಿಕ ಪೇಟೆಯ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.