ಸುಳ್ಯ:ಕನ್ನಡ ಸಾಹಿತ್ಯ ಪರಿಷತ್ತು ಕನ್ನಡವನ್ನು ಬೆಳೆಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಜಗತಿನಾದ್ಯಂತ ಕನ್ನಡವನ್ನು ಪಸರಿಸುವ ಕೆಲಸವನ್ನು ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಡಾ.ಯು.ಪಿ.ಶಿವಾನಂದ ಹೇಳಿದರು. ಅವರು ರಂಗಮಯೂರಿ ಕಲಾಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 7 ದಿನಗಳ ಕಾಲ
ನಡೆಯಲಿರುವ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ 2025ನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಭಾವನಾ ಸುಗಮ ಸಂಗೀತದ ಅಧ್ಯಕ್ಷ ಕೆ.ಆರ್.ಗೋಪಾಲಕೃಷ್ಣ, ಸಂಗೀತ ಶಿಕ್ಷಕಿ ಸುಮನಾ ರಾವ್ ಪುತ್ತೂರು ಭಾಗವಹಿಸಿದ್ದರು.
ಕಸಾಪ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷರಾದ ಚಂದ್ರಾವತಿ ಬಡ್ಡಡ್ಕ, ಕಸಾಪ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ ಮತ್ತು ಚಂದ್ರಮತಿ ಕೆ.,ಗೌರವ ಕೋಶಾಧಿಕಾರಿ ದಯಾನಂದ ಆಳ್ವ, ಕಾರ್ಯಕ್ರಮ ಸಂಯೋಜಕ ಮತ್ತು ರಂಗ ಮಯೂರಿಯ ನಿರ್ದೇಶಕ ಲೋಕೇಶ್ ಊರುಬೈಲು ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಕಸಾಪ ನಿರ್ದೇಶಕ,ಕಾರ್ಯಕ್ರಮ ಸಂಯೋಜಕ ಕೇಶವ ಸಿ.ಎ.ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಲೋಕೇಶ್ ಊರುಬೈಲು ವಂದಿಸಿದರು.
ಕಾರ್ಯಕ್ರಮ ಸಂಯೋಜಕಿ, ಕಸಾಪ ನಿರ್ದೇಶಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಗಾಯಕ- ಗಾಯಕಿಯರಿಂದ ಕನ್ನಡ ಗಾನ ಕಲರವ ನಡೆಯಿತು.















