ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ -2025 ಕಾರ್ಯಕ್ರಮವು ನ.1ರಿಂದ 7ರ ತನಕ ನಡೆಯಲಿದೆ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ಭಾಷೆ, ನಾಡು, ನುಡಿ ಸಂಬಂಧಿಸಿ ವೈವಿಧ್ಯಮಯ
ಕಾರ್ಯಕ್ರಮಗಳೊಂದಿಗೆ ಸಾಹಿತ್ಯ ಸಂಭ್ರಮ ನಡೆಯಲಿದೆ. ನ.1ರಂದು
ಅ.2ಗಂಟೆಗೆ ಸಾಹಿತ್ಯ ಸಂಭ್ರಮ -2025ರ ಉದ್ಘಾಟನಾ ಸಮಾರಂಭ ಹಾಗೂ ಕನ್ನಡ ಗಾನ ಕಲರವ ಕಾರ್ಯಕ್ರಮ ಸುಳ್ಯ ರಂಗಮಯೂರಿ ಕಲಾಶಾಲೆಯಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತ ಡಾ.
ಯು. ಪಿ. ಶಿವಾನಂದ ಅವರು ಉದ್ಘಾಟಿಸಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಭಾಗವಹಿಸಲಿದ್ದಾರೆ. ಕನ್ನಡ ಗಾನ ಕಲರವದಲ್ಲಿ ಸುಳ್ಯ ತಾಲೂಕಿನ ಗಾಯಕರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ನ.2ರಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಹೋಬಳಿ ಘಟಕ ಹಾಗೂ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಹಕಾರದೊಂದಿಗೆ ದಿ.ಯು. ಸುಬ್ರಾಯ ಗೌಡ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಪೌರ್ಣಮಿ ಸಮ್ಮೇಳಾನಧ್ಯಕ್ಷತೆ ವಹಿಸುವರು.ರಾಷ್ಟ್ರ ಧ್ವಜಾರೋಹಣವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ. ಪಿ. ಬಿ. ಸುಧಾಕರ ರೈ,ಕನ್ನಡ ಧ್ವಜಾರೋಹಣವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ ನೆರವೇರಿಸಲಿದ್ದಾರೆ. ಸಮ್ಮೇಳನವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಅವರು ನೆರವೇರಿಸಲಿದ್ದಾರೆ. ಸುಳ್ಯ ತಾಲೂಕಿನ ವಿವಿಧ ಶಾಲಾ ಕಾಲೇಜು ವಿದಾರ್ಥಿಗಳಿಂದ ವಿದ್ಯಾರ್ಥಿ ಕವಿಗೋಷ್ಠಿ, ವಿದ್ಯಾರ್ಥಿ ಚರ್ಚಾ ಗೋಷ್ಠಿ, ಸಮಾರೋಪ ಸಮಾರಂಭ ನಡೆಯಲಿದೆ.

ನ.3ರಂದು ಕನ್ನಡಗಾನ ಯಾನ ಕಾವ್ಯಮಿಲನ ಹಾಗೂ ಸ್ಪರ್ಧಾ ಕಾರ್ಯಕ್ರಮ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲಿನಲ್ಲಿ ನಡೆಯಲಿದೆ.ಖ್ಯಾತ ವೈದ್ಯರಾದ ಡಾ.ಅನಂತ ಪದ್ಮನಾಭ ಭಟ್ ಎರ್ಕಲ್ನಾಡಿ ಉದ್ಘಾಟಿಸುವರು ಚಂದ್ರಶೇಖರ ಮಂಡೆಕೋಲು ರಾಜ್ಯೋತ್ಸವ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಭಾಗವಹಿಸಲಿದ್ದಾರೆ.
ನ.4ರಂದು ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ನುಡಿ ಸಂಭ್ರಮ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಸಾಹಿತಿ ಲೀಲಾ ದಾಮೋದರ ಉದ್ಘಾಟಿಸಲಿದ್ದಾರೆ. ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಲಿದ್ದಾರೆ.ನ.5ರಂದು ಕನ್ನಡ ರಾಜ್ಯೋತ್ಸವ ಉಪನ್ಯಾಸ – ಪತ್ರಕರ್ತ ಸಾಹಿತಿಗಳ ಬೆಳದಿಂಗಳ ಕವಿಗೋಷ್ಠಿ ಕಾರ್ಯಕ್ರಮ ಸುಳ್ಯದ ಅಂಬಟಡ್ಕದಲ್ಲಿರುವ ಪ್ರೆಸ್ ಕ್ಲಬ್ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ಶ್ರೀ ಕುತ್ಯಾಳ ನಾಗಪ್ಪ ಗೌಡ (ಕಿರಣ) ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಅದ್ಯಕ್ಷತೆ ವಹಿಸಲಿದ್ದಾರೆ. ಜಾನಪದ ಸಂಶೋಧಕರಾದ ಸುಂದರ ಕೇನಾಜೆ “ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಕರ್ತರ ಪಾತ್ರ” ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಬಳಿಕ ಪತ್ರಕರ್ತರ ಸಾಹಿತಿಗಳ ಬೆಳದಿಂಗಳ ಕವಿಗೋಷ್ಠಿ ನಡೆಯಲಿದೆ.
ನ.6ರಂದು ಪಂಜ ಹೋಬಳಿ ಮಟ್ಟದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ಕಲರವ ಹಾಗೂ ವಿದಾರ್ಥಿಗಳಿಗೆ ಸ್ಥಳದಲ್ಲಿಯೇ ಕವನ ರಚನೆ, ಕನ್ನಡ ಭಾಷಣ,
ಕನ್ನಡ ಗೀತ ಗಾಯನ ಸ್ಪರ್ಧೆಗಳು ಪ್ರಧಾನ ಮಂತ್ರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ ಗುತ್ತಿಗಾರು ಇಲ್ಲಿ ನಡೆಯಲಿದೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಉದ್ಘಾಟಿಸಲಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಕಾರ್ಯಕ್ರಮದ ಅದ್ಯಕ್ಷತೆ ವಹಿಸಲಿದ್ದಾರೆ.
ನ.7ರಂದು ಸಾಹಿತ್ಯ ಸಂಭ್ರಮದ ಸಮಾರೋಪ ಸಮಾರಂಭ, ಸನ್ಮಾನ ಗಾನ ವೈಭವ ಕಾರ್ಯಕ್ರಮ ಅಯ್ಯಪ್ಪ ಭಜನಾ ಮಂದಿರ ದುಗಲಡ್ಕದಲ್ಲಿ ನಡೆಯಲಿದೆ. ನಗರ ಯೋಜನಾ ಪ್ರಾಧಿಕಾರ ಸುಳ್ಯ ಇದರ ಅಧ್ಯಕ್ಷರಾದ ಕೆ. ಎಂ. ಮುಸ್ತಫಾ ಸಮಾರೋಪ ಭಾಷಣ ಮಾಡುವರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ
ಪೂರ್ವಾಧ್ಯಕ್ಷ ಪಿ.ಸಿ. ಜಯರಾಮ ಸಾಧಕರನ್ನು ಸನ್ಮಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉದಯಕುಮಾರಿ ಬಿರ್ಮುಕಜೆ ಇವರಿಗೆ ಕಾದಂಬರಿ ಕ್ಷೇತ್ರದಲ್ಲಿ, ಡಾ.ಚಂದ್ರಶೇಖರ ದಾಮ್ಲೆ ಅವರಿಗೆ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಚಂದ್ರಶೇಖರ ಮೋಂಟಡ್ಕ ಇವರಿಗೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಕನ್ನಡ ರಾಜ್ಯೋತ್ಸವ ಸನ್ಮಾನವನ್ನು ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ ಯಕ್ಷಗಾನ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಚಂದ್ರಶೇಖರ ಪೇರಾಲು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿ
ತೇಜಸ್ವಿ ಕಡಪಳ,ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಸುಳ್ಯ ಹೋಬಳಿ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ,
ಕಸಾಪ ಕೋಶಾಧಿಕಾರಿ ದಯಾನಂದ ಆಳ್ವ,ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರಾದ ಕೇಶವ ಸಿ.ಎ, ಲತಾಶ್ರೀ ಸುಪ್ರೀತ್ ಮೋಂಟಡ್ಕ, ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ ಉಪಸ್ಥಿತರಿದ್ದರು.















