The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಶಾಸಕರ ವಿಶೇಷ ಅನುದಾನ 40 ಲಕ್ಷದಲ್ಲಿ ನಗರ ರಸ್ತೆ ಅಭಿವೃದ್ಧಿ: ಕೇರ್ಪಳ ರಸ್ತೆ ಕಾಮಗಾರಿ ಆರಂಭ: ನಗರೋತ್ಥಾನ ಯೋಜನೆಯಲ್ಲಿ 2.86 ಕೋಟಿಯ ಟೆಂಡರ್ ಪೂರ್ತಿ

by ದಿ ಸುಳ್ಯ ಮಿರರ್ ಸುದ್ದಿಜಾಲ November 11, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 11, 2022
Share this article

ಸುಳ್ಯ: ಸುಳ್ಯ ನಗರದ ಕೇರ್ಪಳ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿದೆ. ಕೇರ್ಪಳದ ದುರ್ಗಾ ಪರಮೇಶ್ವರಿ ಕಲಾ‌ ಮಂದಿರದ ಬಳಿಯಲ್ಲಿ ನ.11 ರಂದು ಸಂಜೆ ಕಾಮಗಾರಿ ಆರಂಭಗೊಂಡಿದೆ‌. ಶಾಸಕರ ವಿಶೇಷ ಅನುದಾನ 40 ಲಕ್ಷ ರೂ ಮೊತ್ತದಲ್ಲಿ ಕೇರ್ಪಳ ಮತ್ತು ಜಟ್ಟಿಪಳ್ಳದಲ್ಲಿ ಒಟ್ಟು 610 ಮೀಟರ್ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯಲಿದೆ.ಕೇರ್ಪಳದಲ್ಲಿ 20 ಲಕ್ಷ ಮೊತ್ತದಲ್ಲಿ 305 ಮೀಟರ್

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕಾಮಗಾರಿ ನಡೆಯಲಿದೆ. ದುರ್ಗಾಪರಮೇಶ್ವರಿ ಕಲಾ ಮಂದಿರದಿಂದ 65 ಮೀಟರ್ ಕಾಂಕ್ರೀಟೀಕರಣ, ಅಂಗಡಿ ಮಠ ಅಡ್ಡರಸ್ತೆಯಿಂದ ಹೊಳೆಯ ಬದಿಯ ರಸ್ತೆಯಲ್ಲಿ 170 ಮೀಟರ್, ಕೇರ್ಪಳ ಬಂಟ್ಸ್ ಹಾಸ್ಟೇಲ್ ಬಳಿಯಿಂದ ಅಂಗಡಿ ಮಠದವರೆಗೆ 70 ಮೀಟರ್ ಕಾಂಕ್ರೀಟೀಕರಣ ನಡೆಯಲಿದೆ. 20 ಲಕ್ಷದಲ್ಲಿ ಜಟ್ಟಿಪಳ್ಳ ಮುಖ್ಯರಸ್ತೆ 305 ಮೀಟರ್ ಕಾಂಕ್ರೀಟೀಕರಣ ನಡೆಯಲಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ತಿಳಿಸಿದ್ದಾರೆ. ಕೇರ್ಪಳದಲ್ಲಿ ಇಂದು ಸಂಜೆ ಕಾಂಕ್ರೀಟ್ ಕಾಮಗಾರಿ ಆರಂಭಗೊಂಡಿದ್ದು ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ನ.ಪಂ.ನಾಮ ನಿರ್ದೇಶಿತ ಸದಸ್ಯ ಬೂಡು ರಾಧಾಕೃಷ್ಣ ರೈ, ಬಿಜೆಪಿ ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಲಕ್ಷ್ಮಣ‌ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.

ನಗರೋತ್ಥಾನ ಯೋಜನೆಯಲ್ಲಿ 2.86 ಕೋಟಿ ಟೆಂಡರ್:
ನಗರೋತ್ಥಾನ ಯೋಜನೆಯಲ್ಲಿ 2.86 ಕೋಟಿ ರೂ ವೆಚ್ಚದಲ್ಲಿ ವಿವಿಧ ರಸ್ತೆಗಳ ಡಾಮರೀಕರಣ, ಕಾಂಕ್ರೀಟೀಕರಣ, ಚರಂಡಿ ದುರಸ್ತಿ ಕಾರ್ಯ ನಡೆಯಲಿದೆ. ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ತಿಯಾಗಿದೆ. ಈ ತಿಂಗಳ ಕೊನೆಯಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದ್ದಾರೆ. ಕೇರ್ಪಳ ಭಗವತಿ ದೇವಸ್ಥಾನದ ದ್ವಾರದಿಂದ‌ ಕೇರ್ಪಳ ಕಟ್ಟೆಯವರೆಗಿನ ರಸ್ತೆ, ಕಾನತ್ತಿಲ ರಸ್ತೆ, ನಾವೂರು ರಸ್ತೆ, ಕೊಯಿಕುಳಿ ರಸ್ತೆ,ಬೀರಮಂಗಲ ರಸ್ತೆ, ಪರಿವಾರಕಾನ ರಸ್ತೆ, ಭಸ್ಮಡ್ಕ-ಕುಂತಿನಡ್ಕ ರಸ್ತೆ ಸೇರಿ ವಿವಿಧ ರಸ್ತೆಗಳು ಅಭಿವೃದ್ಧಿ ಕಾಣಲಿದೆ ಎಂದು ವಿನಯಕುಮಾರ್ ಕಂದಡ್ಕ ತಿಳಿಸಿದ್ದಾರೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಬಾಲ್ ಬ್ಯಾಡ್ಮಿಂಟನ್:ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ
next post
ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟದಲ್ಲಿ ಟಿ.ಎಂ.ಶಾಹಿದ್ ತೆಕ್ಕಿಲ್ ಭಾಗಿ

You may also like

ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ:...

June 4, 2023

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ: ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ...

June 4, 2023

ಅರೆಭಾಷೆ ರಸಾಯನ: ಐತಾರದ ಪೊಳ್ಮೆ.. ಪೂರಾ ಹೆಳ್ಮಕ್ಕಳಿಗೆ ಕೊಟ್ಟರೆ ಗಳ್ಮಕ್ಕಳಿಗೆ...

June 4, 2023

ಮೊಬೈಲ್ ಗ್ಯಾರೇಜ್‌ನಲ್ಲಿ ಸ್ಮಾರ್ಟ್ ಫೋನ್ ಖರೀದಿಸಿ.. ಆಕರ್ಷಕ ಛತ್ರಿ ಉಚಿತವಾಗಿ...

June 4, 2023

ಸರಕಾರದ ಗ್ಯಾರಂಟಿ ಯೋಜನೆ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ...

June 3, 2023

ಎನ್ಎಸ್‌ಯುಐ ವತಿಯಿಂದ ಕೆ.ಎಸ್.ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮುರಿದು ಹೋದ ಆಸನದ...

June 3, 2023

5 ಗ್ಯಾರಂಟಿ ಯೋಜನೆಗಳಂತಹಾ ಜನಪರ ಕಾರ್ಯಕ್ರಮ ನೀಡಲು ಕಾಂಗ್ರೆಸ್‌ನಿಂದ ಮಾತ್ರ...

June 3, 2023

ರೋಟರಿ ಪೂರ್ವಾಧ್ಯಕ್ಷರಿಗೆ ಗೌರವಾರ್ಪಣೆ ಹಾಗೂ ಚಾರ್ಟರ್ ನೈಟ್ ಕಾರ್ಯಕ್ರಮ.

June 3, 2023

ಬಾಲಸೋರ್ ರೈಲು ಅಪಘಾತ: ಮೃತರ ಸಂಖ್ಯೆ 233 ಕ್ಕೆ, 900...

June 3, 2023

ಒಡಿಶಾ ರೈಲು ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ರೂ.,...

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ