The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಸಂಪಾಜೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಹಬ್ಬ

by ದಿ ಸುಳ್ಯ ಮಿರರ್ ಸುದ್ದಿಜಾಲ November 14, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 14, 2022
Share this article

ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್, ಹಾಗು ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಹಬ್ಬ ತೆಕ್ಕಿಲ್ ಶಾಲೆಯಲ್ಲಿ ನಡೆಯಿತು. ಗ್ರಾಮದ 7 ಪ್ರಾಥಮಿಕ ಹಾಗೂ 4 ಪ್ರೌಢಶಾಲೆ ಮಕ್ಕಳು ಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ವಸ್ತು ಪ್ರದರ್ಶನವನ್ನು ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ. ಪಿ ಜಗದೀಶ್ ಹಾಗೂ ದಿನಕರ ಸಣ್ಣಮನೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ವಹಿಸಿದ್ದರು. ಸಭಾ ಕಾರ್ಯಕ್ರಮಕ್ಕೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯದರ್ಶಿ ದಾಮೋದರ ಮಾಸ್ಟರ್, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ ಚಾಲನೆ ನೀಡಿದರು.ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ರೈ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಧಿಕಾರಿ ಎನ್.ಭವಾನಿ ಶಂಕರ್ ಭಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಧಿಕಾರಿ ಎಸ್.ಪಿ. ಮಹದೇವ್, ಕೆ. ವಿ. ಜಿ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾದರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಪಂಚಾಯತ್ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಸುಂದರಿ ಮುಂಡಡ್ಕ, ಅಬೂಸಾಲಿ ಪಿ. ಕೆ. ಸುಮತಿ ಶಕ್ತಿವೇಲು, ಎಸ್. ಕೆ. ಹನೀಫ್, ರಜನಿ ಶರತ್, ಅನುಪಮಾ, ವಿಮಲಾ, ವಿಜಯಕುಮಾರ್, ತೆಕ್ಕಿಲ್ ಶಾಲಾ ಆಡಳಿತಾಧಿಕಾರಿ ರಹೀಮ್ ಬೀಜದಕಟ್ಟೆ ನಿವೃತ ಶಿಕ್ಷಕ ಚಿದಾನಂದ ಮಾಸ್ಟರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ರಾಮಚಂದ್ರ ಕಲ್ಲಗದ್ದೆ, ತೆಕ್ಕಿಲ್ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನಕರ ಗೌಡ ಸಣ್ಣಮನೆ, ಸೊಸೈಟಿ ನಿರ್ದೇಶಕರಾದ ಯಮುನಾ ಬಿ. ಎಸ್. ಗಣಪತಿಭಟ್, ಗ್ರಾಮ ಕರಣಿಕರಾದ ಮಿಯಾ ಶಾಬ್ ಮುಲ್ಲಾ ಮಾಜಿ ಪಂಚಾಯತ್ ಸದಸ್ಯರಾದ ತಾಜ್ ಮಹಮ್ಮದ್ ಲಯನ್ಸ್ ಕ್ಲಬ್ ಅಧ್ಯಕ್ಷೆ ನಳಿನಿ ಕಿಶೋರ್,ತೆಕ್ಕಿಲ್ ಶಾಲಾ ಮುಖ್ಯ ಶಿಕ್ಷಕಿ ವಾಣಿ, ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕ, ದ್ವಿತೀಯ ಸವೇರಪುರ ಆಂಗ್ಲಮಾಧ್ಯಮ ಶಾಲೆ, ಹಾಗೂ ಪ್ರೌಢಶಾಲೆ ವಿಭಾಗದಲ್ಲಿ ಸವೇರಪುರ ಆಂಗ್ಲಮಾಧ್ಯಮ ಶಾಲೆ ಪ್ರಥಮ ಸಮಗ್ರ ಪ್ರಶಸ್ತಿ ಹಾಗೂ ಮಾರುತಿ ಪ್ರೌಢಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆಯಿತು. ವೈಯಕ್ತಿಕ ಪ್ರಶಸ್ತಿಯನ್ನು, ಆರ್. ಎಮ್. ಎಸ್. ಎ. ಪ್ರೌಢಶಾಲೆ ಕಲ್ಲುಗುಂಡಿ, ತೆಕ್ಕಿಲ್ ಶಾಲೆ ಗೂನಡ್ಕ, ಸರಕಾರಿ ಶಾಲೆ ಗೂನಡ್ಕ ಪ್ರಶಸ್ತಿ ಪಡೆಯಿತು.ತೆಕ್ಕಿಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಟಿ. ಎಂ. ಶಾಹಿದ್ ತೆಕ್ಕಿಲ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ರಹೀಮ್ ಬೀಜದಕಟ್ಟೆ ವಂದಿಸಿದರು. ಕಾಂತಿ ಬಿ. ಎಸ್ ಹಾಗೂ ಕಿಶೋರ್ ಬಿ. ಎಸ್. ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನಾಗೇಶ್ ಪಿ. ಆರ್, ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಕೇಶವ ಬಂಗ್ಲೆಗುಡ್ಡೆ, ಗ್ರಾಮ ಸಹಾಯಕ ಸೋಮನಾಥ್ ಲಯನ್ಸ್ ಕ್ಲಬ್ ಸದಸ್ಯರಾದ ಕಿಶೋರ್ ಕುಮಾರ್, ಸುರೇಶ್ ಮೆಡಿಕಲ್,ಅಂಗವಿಕಲರ ಅದಿಕಾರಿ ಸುಬ್ರಮಣಿ, ಮಾಜಿ ಮಂಡಲ ಸದಸ್ಯರಾದ ಉಮ್ಮರ್ ಹಾಜಿ, ಸಿದ್ದಿಕ್ ಕೊಕ್ಕೋ,ಪಂಚಾಯತ್ ಸಿಬ್ಬಂದಿಗಳಾದ ಸವಿತಾ ಕಿಶೋರ್, ಹರ್ಷಿತ್, ಭರತ್, ಭೋಜಪ್ಪ, ಉಮೇಶ್, ಗುರುವಪ್ಪ, ಸಲೀಂ ಪೆರುಂಗೋಡಿ, ಉಬೈಸ್ ಗೂನಡ್ಕ ವಿವಿಧ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಅಧ್ಯಾಪಕ ವೃoದಾ, ಸ್ತ್ರೀ ಶಕ್ತಿ ಸದಸ್ಯರು, ಆಶಾ ಕಾರ್ಯಕರ್ತರು, ಧರ್ಮಸ್ಥಳ ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ವತಿಯಿಂದ ಮೂವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಡಿಜಿಟಲ್ ವೈಫೈ ಪ್ರಿಂಟರ್ ಕೊಡುಗೆ
next post
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಯೋಜನೆ ಇನ್ನು ಮುಂದೆ ‘ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ: ಎಲ್ಲಾ ನಾಗರಿಕರು ನೋಂದಾಯಿಸಿಕೊಳ್ಳಲು ಆರೋಗ್ಯ ಇಲಾಖೆ ಸೂಚನೆ

You may also like

ಅಶ್ವಿಜ್ ಅತ್ರೇಯನಿಗೆ ರಿಯಾಲಿಟಿ ಶೋದಲ್ಲಿ ಪ್ರಶಸ್ತಿ

June 7, 2023

ಬನಾರಿಯಲ್ಲಿ ಕೀರಿಕ್ಕಾಡು ಸುಬ್ರಹ್ಮಣ್ಯ ಭಟ್ ಸಂಸ್ಮರಣೆ ಮತ್ತು ಯಕ್ಷಗಾನ ತಾಳಮದ್ದಳೆ

June 5, 2023

ತಾಳಮದ್ದಳೆ – ಒಂದು ಐತಿಹಾಸಿಕ ಅಧ್ಯಯನ” ಎಂಬ ಕೃತಿ ರಚನೆಗೆ...

May 17, 2023

ಸುಳ್ಯ ಭಾಗದಲ್ಲಿ ಚಿತ್ರೀಕರಣಗೊಂಡ ಮೂಗಜ್ಜನ ಕೋಳಿ ಅರೆಭಾಷೆ ಸಿನಿಮಾ ಲಿಪ್ಟ್...

May 15, 2023

ಕೊಚ್ಚಿನ್ ಕನ್ನಡ ಸಂಸ್ಕೃತಿ ಉತ್ಸವದ ಗೋಷ್ಠಿಯಲ್ಲಿ ಪತ್ರಕರ್ತ ನಾಯರ್‌ಕೆರೆ

May 1, 2023

ಸುಳ್ಯದ ರಂಗಮಯೂರಿ ಕಲಾ ಶಾಲೆಯ ವತಿಯಿಂದ ಮಡಿಕೇರಿಯಲ್ಲಿ ‘ಬಣ್ಣ’ ಬೇಸಿಗೆ...

April 23, 2023

ಕನಕಮಜಲು: ಅವನಿ ವಿಹಾರಂ ಭರತನಾಟ್ಯ ಶಿಬಿರ ಸಮಾರೋಪ

April 19, 2023

ರಂಗಮಯೂರಿ ಕಲಾ ಶಾಲೆಯ ವತಿಯಿಂದ ನಡೆದ “ಬಣ್ಣ” ರಾಜ್ಯ ಮಟ್ಟದ...

April 19, 2023

ಪ್ರಕೃತಿಯ ಮಡಿಲಲ್ಲಿ ಭರತನಾಟ್ಯ ವೈಭವಂ..!’ಅವನಿ ವಿಹಾರಂ’ ಕನಕಮಜಲಿನಲ್ಲೊಂದು ವೈಶಿಷ್ಟ್ಯ ಪೂರ್ಣ...

April 17, 2023

ವೇದಗಳು ಭಾರತೀಯ ಸಂಸ್ಕೃತಿಯ ಜೀವಾಳ: ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೆಕೈ...

April 16, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ನಗರ ಸ್ವಚ್ಛತಾ ಅಭಿಯಾನ: ಆಲೆಟ್ಟಿ ರಸ್ತೆಯಲ್ಲಿ 37ನೇ ವಾರದ ಸ್ವಚ್ಛತಾ ಕಾರ್ಯಕ್ರಮ
  • ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
  • ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ ಸನ್ಮಾನ
  • ಹನಿ‌ ಸುರಿಸಿ ಮಾಯವಾದ ವರುಣ: ಮುಂದುವರಿದ ಮಳೆಯ ಕಣ್ಣಾ ಮುಚ್ಚಾಲೆ
  • ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಭಾರತ ವಿರುದ್ಧ ಬೃಹತ್ ಮೊತ್ತದತ್ತ ಆಸ್ಟ್ರೇಲಿಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ