ಸುಳ್ಯ:ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಸನ್ಮಾನ ಮತ್ತು ಆಟಿಕೂಟ ಕಾರ್ಯಕ್ರಮ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು.
ಸುಳ್ಯ ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಲರ್ಸ್ನ ಮಾಲಕ ಗೋವಿಂದ ಭಟ್ ಮುಳಿಯ ಉದ್ಘಾಟಿಸಿದರು.ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ ಉಪನ್ಯಾಸ ನೀಡಿದರು.ಹಿರಿಯ ಪತ್ರಕರ್ತರಾದ
ಭಾಸ್ಕರ ರೈ ಕಟ್ಟ ಎಣ್ಮೂರು ಮತ್ತು ಜಯರಾಮ ಭಟ್ ಸಂಪಾಜೆ ಅವರನ್ನು ಸನ್ಮಾನಿಸಲಾಯಿತು.ಕೆ.ಜೆ.ಯು ಅಧ್ಯಕ್ಷೆ ಜಯಶ್ರೀ ಕೊಯಿಂಗೋಡಿ ಅಧ್ಯಕ್ಷತೆ ವಹಿಸಿದ್ದರು. ಕೆಜೆಯು ಜಿಲ್ಲಾ ಸಮಿತಿ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್,ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಮಂಗಳೂರು ಕೆಜೆಯು ಪದಾಧಿಕಾರಿ ಹಮೀದ್ ವಿಟ್ಲ, ಕೆಜೆಯು ತಾಲೂಕು ಗೌರವಾಧ್ಯಕ್ಷ ಈಶ್ವರ ವಾರಣಾಶಿ, ಕಾರ್ಯದರ್ಶಿ ಗಣೇಶ್ ಕುಕ್ಕುದಡಿ, ಕೋಶಾಧಿಕಾರಿ ಕುಶಾಂತ್ ಮರಕ್ಕಡ ಉಪಸ್ಥಿತರಿದ್ದರು.
ಶಿವರಾಮ ಕಜೆಮೂಲೆ ಮತ್ತು ಅನಿಲ್ ಕಳಂಜ ಸನ್ಮಾನ ಪತ್ರ ವಾಚಿಸಿದರು. ಹರೀಶ್ ಬಂಟ್ವಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶ್ ನೀರಬಿದಿರೆ ಗೌರವಾರ್ಪಣೆ ಪಡೆದ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಯಶ್ವಿತ್ ಕಾಳಂಮನೆ ಸ್ವಾಗತಿಸಿ, ಚೈತ್ರ ಮುಳ್ಯ ಪ್ರಾರ್ಥಿಸಿದರು.ಕಾರ್ಯದರ್ಶಿ ಗಣೇಶ್ ಕುಕ್ಕುದಡಿ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.














