ಮಂಗಳೂರು: ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ ಸರಣಿ ಕೃತಿ 45ನೇಯ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ ಗಣೇಶ್ ರೈ ಅವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಕಾವೇರಿ ಎಂಬ ಕೃತಿಯನ್ನು ಮಂಗಳೂರಿನ ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಾಂಡ ಕೃತಿ ಸೋಮಯ್ಯ ನಗರದ ಪತ್ರಿಕಾ ಭವನದಲ್ಲಿ ನಡೆದ
ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಮಾತನಾಡಿ ಕೃತಿಯು ಕನ್ನಡ, ಇಂಗ್ಲಿಷ್,ಅರೆ ಭಾಷೆ ಮತ್ತು ತಮಿಳು ಭಾಷೆಗಳಲ್ಲಿ ಮೂಡಿಬಂದಿದೆ .ಕಾವೇರಿ ಮಾತೆಯ ಪುರಾಣವನ್ನು ತಿಳಿಸುವ ಈ ಕೃತಿಯು ಕನ್ನಡ, ಇಂಗ್ಲಿಷ್, ಅರೇ ಭಾಷೆ ,ತಮಿಳು ಭಾಷೆ ಯಲ್ಲಿ ಬಿಡುಗಡೆ ಗೊಂಡಿದ್ದು ಸಂಗ್ರಯ ಯೊಗ್ಯ ಕೃತಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕೃತಿಯ ಲೇಖಕ ಮತ್ತು ವಿನ್ಯಾಸಗಾರ ಅಮೃತ ಪ್ರಕಾಶ ಪತ್ರಿಕೆಯ ಉಪಸಂಪಾದಕ ಬಿ.ಕೆ. ಗಣೇಶ್ ರೈ ಅವರು ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿದ್ದರು. ನಮ್ಮ ಕುಡ್ಲ ವಾಹಿನಿಯ ವಾರ್ತಾವಾಚಕಿ ಡಾ. ಪ್ರಿಯ ಹರೀಶ್ ನಿರ್ವಹಿಸಿದರು.















