ಸುಳ್ಯ:ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮಾರ್ಚ್ 15 ರಿಂದ 18 ರ ತನಕ ನಡೆಯಲಿರುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿಯಾಗಿ ಕೂವಂ ಅಳಕ್ಕಲ್ (ಭತ್ತ ಅಳೆಯುವ) ಹಾಗೂ ವೀಳ್ಯ ಕೊಡುವ ಕಾರ್ಯಕ್ರಮ(ಅಡಯಾಳಂ ಕೊಡುಕ್ಕಲ್) ಫೆ.20 ರಂದು ನಡೆಯಿತು.ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆಯು ನೆರವೇರಿ ಬಳಿಕ
ಕೂವಂ ಅಳಕ್ಕಲ್ (ಭತ್ತ ಅಳೆಯುವ) ಕಾರ್ಯವನ್ನು ಪೂರ್ವಸಂಪ್ರದಾಯದಂತೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕುತ್ತಿಕೋಲು ಶ್ರೀ ತಂಬುರಾಟಿ ಭಗವತಿ ಕ್ಷೇತ್ರದ ಸ್ಥಾನಿಕರು, ಕುಟುಂಬದ ಯಜಮಾನ ಕುಂಞಕಣ್ಣ ಎ, ದೈವಂಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಕುತ್ತಿಕೋಲು ಶ್ರೀ ತಂಬುರಾಟ್ಟಿ ಭಗವತಿ ಕ್ಷೇತ್ರದ ಅಧ್ಯಕ್ಷ ಆರ್.ಕುಂಞಿಕಣ್ಣನ್ ಬೇಡಗಂ, ಪ್ರಧಾನ ಕಾರ್ಯದರ್ಶಿ ಕುಂಞಿಕಣ್ಣನ್ ಕುತ್ತಿಕೋಲು ಹಾಗೂ

ಪದಾಧಿಕಾರಿಗಳು,ಉತ್ತರ ಮಲಬಾರ್ ತೀಯ ಸಮುದಾಯದ ಕ್ಷೇತ್ರ ಸಂರಕ್ಷಣಾ ಸಮಿತಿ ಅಧ್ಯಕ್ಷ ರಾಜನ್ ಪೆರಿಯ,ಅರಂಬೂರು ವಯನಾಟ್ ಕುಲವನ್ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಬಾರ್ಪಣೆ, ಕೋಶಾಧಿಕಾರಿ ರಧೀಶನ್ ಅರಂಬೂರು, ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪವಿತ್ರನ್ ಗುಂಡ್ಯ, ಕೋಶಾಧಿಕಾರಿ ಜತ್ತಪ್ಪರೈ,ಕಾರ್ಯಾಧ್ಯಕ್ಷರಾದ ಎನ್.ಎ.ರಾಮಚಂದ್ರ, ನಾರಾಯಣ ಕೇಕಡ್ಕ, ಕೃಷ್ಣಪ್ಪ ಗೌಡ ಕೆದಂಬಾಡಿ, ಕುಂಞಿರಾಮನ್ ಶ್ರೀ ಶೈಲಂ, ರಾಧಾಕೃಷ್ಣ ಪರಿವಾರಕಾನ, ಪದ್ಮಯ್ಯ ಪಡ್ಪು, ಗೌರವ ಸಲಹೆಗಾರರಾದ ಕೊರಗಪ್ಪ ಮಾಸ್ತರ್ ಕಣಕ್ಕೂರು, ಜಯಪ್ರಕಾಶ್ ಕುಂಚಡ್ಕ, ಪುರುಷೋತ್ತಮ ಕೋಲ್ಚಾರು, ಶಿವರಾಮ ಗೌಡ ಕಲ್ಲೆಂಬಿ, ವಾಸುದೇವ ಗೌಡ ಕುಡೆಕಲ್ಲು, ಪದ್ಮಯ್ಯ ಗೌಡ ಕುಂಬಳಚೇರಿ, ಶ್ರೀಪತಿ ಭಟ್ ಮಜಿಗುಂಡಿ, ಗಣಪತಿ ಭಟ್ ಮಜಿಗುಂಡಿ ಹಾಗೂ ಸಮಿತಿಯ ಪದಾಧಿಕಾರಿಗಳು, ಉಪ ಸಮಿತಿಯ ಸಂಚಾಲಕರು ಮತ್ತು ಸದಸ್ಯರು, ಉಪಸ್ಥಿತರಿದ್ದರು.
ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಸಂಜೆ ದರ್ಶನ ಕೈವೀದ್ ನಡೆಯಿತು.