ಸುಳ್ಯ: ಸುಳ್ಯ ತಾಲೂಕು ಕೃಷಿಕ ಸಮಾಜದ ಮೊದಲ ಸಭೆಯು ಕೃಷಿ ಇಲಾಖೆ ಸಭಾಂಗಣದಲ್ಲಿ ನಡೆಯಿತು.ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಕುಸುಮಾಧರ. ಎ. ಟಿ. ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಚಂದ್ರ ಕೋಲ್ಚಾರ್, ತಾಲೂಕು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಶ್ಯಾಪ್ರಸಾದ್ ಅದಂತಡ್ಕ, ಕೋಶಾಧಿಕಾರಿ ಸವಿನ್ ಕೊಡಪಾಲ, ಕೃಷಿ ಇಲಾಖೆಯ
ಸಹಾಯಕ ಉಪನಿರ್ದೇಶಕರಾದ ಗುರುಪ್ರಸಾದ್, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಡಿಕೆಗೆ ಎಲೆ ಚುಕ್ಕಿ ರೋಗ ಮತ್ತು ಹಳದಿ ರೋಗದ ಬಗ್ಗೆ ತಾಲೂಕಿನ 3 ಕಡೆ ಮಾಹಿತಿ ಕಾರ್ಯಾಗಾರ ನಡೆಸಲು, ಡಿಸೆಂಬರ್ ಒಳಗಾಗಿ ಕೃಷಿಮೇಳ ಆಯೋಜಿಸಲು, ತಾಲೂಕು ಕೃಷಿಕ ಸಮಾಜಕ್ಕೆ ನೂತನ ಕಾರ್ಯಾಲಯ ನಿರ್ಮಿಸಲು ಕಾರ್ಯಪ್ರವೃತ್ತರಾಗಲು, ಕೃಷಿ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಕೃಷಿ ಇಲಾಖೆ ಉಪನಿರ್ದೇಶಕರಾದ ಗುರುಪ್ರಸಾದ್ ಸ್ವಾಗತಿಸಿ ಇಲಾಖೆಯ ಸವಲತ್ತುಗಳ ಬಗ್ಗೆ ತಿಳಿಸಿದರು. ತೋಟಗಾರಿಕಾ ಇಲಾಖೆಯ ಸವಲತ್ತುಗಳ ಬಗ್ಗೆ ಸಹಾಯಕ ತೋಟಗಾರಿಕಾ ಅಧಿಕಾರಿ ಅರಬಣ್ಣ ಪೂಜೇರಿ ಮಾಹಿತಿ ನೀಡಿದರು.ನಂದಿತಾ ಕಾರ್ಯಕ್ರಮ ನಿರೂಪಿಸಿದರು.