ಸುಳ್ಯ:ಕೃತರ್ಥ ಪ್ರೊಡಕ್ಷನ್ ನಿರ್ಮಾಣದ ನೂತನ ಚಲನಚಿತ್ರ ‘ಕುಡ್ಲ ನಮ್ದು ಊರು’ ಸೆ.5 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಹಾಗೂ ನಾಯಕ ನಟರಾದ ದುರ್ಗಾ ಪ್ರಸಾದ್ ಆರ್.ಕೆ (ಅಲೋಕ್) ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೊದಲ ಹಂತದಲ್ಲಿ ರಾಜ್ಯದ
80ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಚಿತ್ರದ ಪ್ರೀಮಿಯರ್ ಶೋ ಈಗಾಗಲೇ ವಿವಿಧ ಕಡೆಗಳಲ್ಲಿ ನಡೆದಿದ್ದು ಉತ್ತಮ ಪ್ರತಿಕ್ರಿಯೆ ಬಂದಿದೆ.ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲುಗಲ್ಲು ಮೂಡಿಸಲಿದೆ ಎಂಬ ಪ್ರೇಕ್ಷಕರ ಅಭಿಪ್ರಾಯದಿಂದ ಭರವಸೆ ಮೂಡಿದೆ ಎಂದರು.
ಈ ಚಿತ್ರದಲ್ಲಿ ಮನುಷ್ಯನ ಜೀವನದ ಮೂರು ಹಂತಗಳು ಹಾಗೂ ಪರಶುರಾಮ ಸೃಷ್ಟಿಯ ತುಳುನಾಡಿನ ಬಗ್ಗೆ ವಿವರಿಸಲಾಗಿದೆ.ಜೀವನದಲ್ಲಿ ಸವಾಲುಗಳು ಹೇಗೆ ಬರುತ್ತದೆ ಎಂಬುದು ಈ ಚಿತ್ರದಲ್ಲಿ ವಿಭಿನ್ನ ರೀತಿಯಲ್ಲಿ ತೋರಿಸುವ ಪ್ರಯತ್ನವನ್ನು ಮಾಡಿದ್ದೇವೆ. ಚಿತ್ರದಲ್ಲಿ ಸಾಕಷ್ಟು ಟ್ವಿಸ್ಟ್ ಗಳಿದ್ದು ಪ್ರೇಕ್ಷಕರಿಗೆ ಕೊನೆಯವರೆಗೂ ಕುತೂಹಲಾವನ್ನಿರಿಸಿಕೊಂಡು ಮುಂದುವರಿಯುತ್ತದೆ.ಚಿತ್ರವನ್ನು ಕೃತರ್ಥ ಪ್ರೊಡಕ್ಷನ್ ನಿರ್ಮಿಸಿದೆ. ಅಂಕಿತ ಪದ್ಮ, ಚಿತ್ರ ಗೌಡ,ನರೇಂದ್ರ ಜೈನ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.ನಾಯಕ ನಟರುಗಳಾಗಿ ಅಲೋಕ್ ಎ.ಕೆ, ಸ್ವರಾಜ್ ಶೆಟ್ಟಿ,ಲಂಚು ಲಾಲ್ ಕೆ.ಎಸ್ ನಟಿಸಿದ್ದಾರೆ.

ನಾಯಕ ನಟಿಯರುಗಳಾಗಿ ಅನಿಕಾ ಶೆಟ್ಟಿ, ಶ್ರೇಯಾ ಶೆಟ್ಟಿ,ನಯನ ಸಾಲಿಯನ್, ಅಭಿನಯಿಸಿರುತ್ತಾರೆ.
ತಾರಾಗಣದಲ್ಲಿ ಪ್ರಕಾಶ್ ತುಮಿ ನಾಡು, ದಿಲೀಪ್ ಕಾರ್ಕಳ, ಪ್ರಜ್ವಲ್ ಪ್ರಶಾಂತ್, ಮಂಜು ಸುವರ್ಣ, ಮತ್ತಿತರು ಇದ್ದಾರೆ.ನಿರ್ದೇಶನ ದುರ್ಗಾ ಪ್ರಸಾದ್ ಆರ್ ಕೆ (ಅಲೋಕ್),ನಿರ್ವಹಿಸಿದ್ದಾರೆ.
ಕ್ಯಾಮೆರಾ ಮ್ಯಾನ್ ಮಯೂರ್ ಶೆಟ್ಟಿ ನಿರ್ವಹಿಸಿದ್ದು. ನಿಶ್ಚಿತ್ ಪೂಜಾರಿ ಸಂಕಲನ ಮಾಡಿದ್ದಾರೆ. ನಿತಿನ್ ಶಿವರಾಂ ಸಂಗೀತ ನಿರ್ದೇಶನದಲ್ಲಿ ಹಾಡುಗಳು ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಚಿತ್ರದ ಹಿನ್ನೆಲೆ ಸಂಗೀತವು ಶ್ರೀಸಸ್ತಾ ಹಾಗೂ ಅಂಜನ್ ಪೂಜಾರಿ ರವರು ಅದ್ಭುತವಾಗಿ ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯವಾಗಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಹಾಯಕ ನಿರ್ದೇಶಕ ಯತೀಶ್ ಕದ್ರ, ಜಗದೀಶ್ ಕದ್ರಿ ಉಪಸ್ಥಿತರಿದ್ದರು.












