ಸುಳ್ಯ:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾದಿನಾಚರಣೆ ಅಂಗವಾಗಿ ವಿಧ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧಾ ಕಾರ್ಯಕ್ರಮ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ್ ಎನ್ ಉದ್ಘಾಟಿಸಿದರು.ಪತ್ರಕರ್ತರ ಸಂಘದ ವತಿಯಿಂದ ಪ್ರತಿ ವರ್ಷ ಈ ರೀತಿಯ
ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಪತ್ರಿಕೋದ್ಯಮ ಕ್ಷೇತ್ರ ವಿಫುಲ ಅವಕಾಶಗಳ ಆಗರ ಎಂದು ಅವರು ಅಭಿಪ್ರಾಯಪಟ್ಟರು.ಮುಖ್ಯ ಅಥಿತಿಗಳಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಎಸ್. ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪ್ಪಾಡಿ ವಹಿಸಿದ್ದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸದಸ್ಯ ಗಿರೀಶ್ ಅಡ್ಪಂಗಾಯ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಗಂಗಾಧರ ಕಲ್ಲಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ವಂದಿಸಿದರು. ಮಿಥುನ್ ಕರ್ಲಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಪತ್ರಕರ್ತರ ಸಂಘದ ವತಿಯಿಂದ ದಿ. ಅಬ್ದುಲ್ ಸತ್ತಾರ್ ಗೋರಡ್ಕ ಹಾಗೂ ದಿ.ಚೇತನ್ ರಾಮ್ ಸ್ಮರಣಾರ್ಥ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ದೆ “ಡಿಜಿಟಲ್ ಯುಗದಲ್ಲಿ ಪತ್ರಿಕೋದ್ಯಮದ ಪಾತ್ರ ಮತ್ತು ಸವಾಲುಗಳು” ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ “ಮಾಧ್ಯಮಗಳು ಸಮಾಜದ ಕನ್ನಡಿಯಾಗಿ ಕಾರ್ಯನಿರ್ವಹಿಸುತಿದೆಯೇ..?” ಎಂಬ ವಿಷಯಗಳ ಕುರಿತು ಸ್ಪರ್ಧಾ ಕಾರ್ಯಕ್ರಮ ನಡೆಯಿತು.








