ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಭಾನುವಾರ ನಡೆದಿದ್ದು, ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ.ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ. ಸುಳ್ಯದ ಪತ್ರಕರ್ತ ಗಿರೀಶ್ ಅಡ್ಪಂಗಾಯ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ
ಮುಹಮ್ಮದ್ ಆರೀಫ್ ಪಡುಬಿದ್ರಿ, ವಿಲ್ಪರ್ಡ್ ಡಿಸೋಜ, ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸುರೇಶ್ ಡಿ.ಪಳ್ಳಿ,ಸತೀಶ್ ಇರಾ ಮತ್ತು ಸಿದ್ದಿಕ್ ನೀರಾಜೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಕೆ. ಪೂಜಾರಿ ಹಾಗೂ ಕೋಶಾಧಿಕಾರಿಯಾಗಿ ವಿಜಯ್ ಕೋಟ್ಯಾನ್ ಪಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪುಷ್ಪರಾಜ್,ಶ್ರೀನಿವಾಸ್, ಗಿರೀಶ್
ದ.ಕ.ಜಿಲ್ಲಾ ಕಾರ್ಯಕಾರಿ ಸಮಿತಿಗೆ ಗಿರೀಶ್ ಅಡ್ಪಂಗಾಯ, ಜಯಶ್ರೀ, ಹರೀಶ್ ಕೆ. ಆದೂರ್, ಸಂದೀಪ್ ವಾಗ್ಲೆ, ದಿವಾಕರ ಪದ್ಮುಂಜ, ಸಂದೇಶ್ ಜಾರ, ಭುವನೇಶ್ವರ ಜಿ, ಲಕ್ಷ್ಮೀನಾರಾಯಣ ರಾವ್, ಹರೀಶ್ ಮೋಟುಕಾನ, ಅಶೋಕ್ ಶೆಟ್ಟಿ ಬಿ.ಎನ್, ಕಿರಣ್ ಸಿರ್ಸಿಕರ್, ಸಂದೀಪ್ ಕುಮಾರ್ ಎಂ., ಅಭಿಷೇಕ್ ಎಚ್.ಎಸ್.,ಸಂದೀಪ್ ಸಾಲ್ಯಾನ್, ಆರೀಫ್ ಕಲ್ಕಟ್ಟ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಿ.ಎ.ಖಾದರ್ ಷಾ ತಿಳಿಸಿದ್ದಾರೆ.












