The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಾಧನೆಯ ಕಿರೀಟಕ್ಕೆ ‘ರಾಜ್ಯೋತ್ಸವ ಪ್ರಶಸ್ತಿ’ಯ ಗರಿ.

by ದಿ ಸುಳ್ಯ ಮಿರರ್ ಸುದ್ದಿಜಾಲ November 1, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 1, 2022
Share this article

ಮಂಗಳೂರು: ಈ‌ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ‌ ಘಟಕದ ಆಯ್ಕೆಯಾಗುವ ಮೂಲಕ ವಿಶೇಷ ಗಮನ ಸೆಳೆದಿದೆ. ಗ್ರಾಮೀಣ ಅಭಿವೃದ್ಧಿ ದಿಶೆಯಲ್ಲಿ ಈ ಸಂಘ ಕೈಗೊಂಡ ಕಾರ್ಯಕ್ರಮಗಳು ರಾಜ್ಯವ್ಯಾಪಿ ಗಮನಸೆಳೆದಿವೆ. ಈ ಸಾಧನೆಯನ್ನು ಪರಿಗಣಿಸಿರುವ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲಾ‌ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ. ಕಳೆದ ನಾಲ್ಕು ದಶಕಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಶ್ರೇಯಾಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಗ್ರಾಮ ವಾಸ್ತವ್ಯ

ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡ ಪತ್ರಕರ್ತರ ಸಂಘ ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ.
ಮಂಗಳೂರಿನಲ್ಲಿ 1976, ಅಕ್ಟೋಬರ್ 6ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂತು. ಆ ಬಳಿಕ 46 ವರ್ಷಗಳಲ್ಲಿ ಸಂಘದ ಹಿರಿಯ ,ಕಿರಿಯ ಸದಸ್ಯರು ನಡೆಸಿದ ತ್ಯಾಗ, ಪರಿಶ್ರಮದ ಫಲವಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಈ ಹೊತ್ತು ರಾಜ್ಯದ ಅತ್ಯುತ್ತಮ ಸಂಘವಾಗಿ ಗುರುತಿಸಿಕೊಂಡಿದೆ. ಲೇಡಿಹಿಲ್ ನಲ್ಲಿ ಸ್ವಂತ ಕಚೇರಿ ಕಟ್ಟಡ ಪತ್ರಿಕಾಭವನವನ್ನು ಹೊಂದಿದೆ.ಜಿಲ್ಲಾ ಸಂಘ ಸದಸ್ಯರ ಹಿತ ಕಾಯುವ ಜೊತೆಗೆ ಸಮಾಜಮುಖಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ. ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ಕಳೆದ 5 ವರ್ಷಗಳ ಅವಧಿಯ ಪ್ರಮುಖ ಹೆಜ್ಜೆಗಳು ಇಂತಿವೆ.

ಪತ್ರಕರ್ತರ ಗ್ರಾಮ ವಾಸ್ತವ್ಯ:
ಕುತ್ಲೂರು(2018),ಮಡಪ್ಪಾಡಿ (2020)ಮತ್ತು ಸಿರಿಬಾಗಿಲು-ಕೊಂಬಾರಿನಲ್ಲಿ(2021), ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಗ್ರಾಮೀಣ ಅಭಿವೃದ್ಧಿ ಸಚಿವರ ಮೂಲಕ 1.50 ಕೋಟಿ ರೂ. ಅನುದಾನ ದೊರಕಿಸಿಕೊಟ್ಟು ಸರ್ವೃ ಋತು ರಸ್ತೆ ನಿರ್ಮಾಣ ಆಗಿದೆ. ಅಲ್ಲದೆ ಗ್ರಾಮದ ಹಲವು ಸಮಸ್ಯೆಗಳ ಬಗ್ಗೆ ಗ್ರಾಮ ವಾಸ್ತವ್ಯದಲ್ಲಿ ಬೆಳಕು ಚೆಲ್ಲಲಾಗಿತ್ತು. ಬಳಿಕ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸರಕಾರ ಅನುದಾನ ನೀಡಿದೆ. ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ(2020) ಯಶಸ್ವಿಯಾಗಿ ಸಂಘಟಿಸಲಾಗಿದೆ. ಪ್ರಥಮ ಜಿಲ್ಲಾ ಸಮ್ಮೇಳನ(2019),ಎರಡು ಬಾರಿ ಕೆಯುಡಬ್ಲ್ಯು ಜೆ ರಾಜ್ಯ ಕಾರ್ಯಕಾರಿಣಿ ಸಭೆ(2019 ಮತ್ತು2020) ನಡೆಸಲಾಗಿದೆ. ನಿಧನರಾದ ಐದು ಮಂದಿ ಪತ್ರಕರ್ತರ ಕುಟುಂಬಗಳಿಗೆ ಮುಖ್ಯ ಮಂತ್ರಿ ಪರಿಹಾರ ನಿಧಿಯಿಂದ ಕೆಯುಡಬ್ಲ್ಯುಜೆ ಮೂಲಕ 19 ಲಕ್ಷ ರೂ.ಪರಿಹಾರ ಒದಗಿಸಿಕೊಡಲಾಗಿದೆ.ಮಳೆಯಿಂದ ತೊಂದರೆಗೊಳಗಾದ ಪತ್ರಕರ್ತರಿಗೆ ಸಂಘ ನೆರವಾಗಿತ್ತು. ಮುಖ್ಯ ಮಂತ್ರಿ ಪರಿಹಾರ ನಿಧಿಗೆ 2018ರಲ್ಲಿ ನಿಧಿ ಸಮರ್ಪಿಸಿತ್ತು. ಪತ್ರಕರ್ತರು ಮತ್ತು ಅವರ ಕುಟುಂಬದ ಆರೋಗ್ಯ ರಕ್ಷಣೆಗೆ ಪತ್ರಿಕಾಭವನದಲ್ಲಿ ಮಿಡಿಯಾ ಹೆಲ್ತ್ ಕ್ಲಿನಿಕ್.ಅನಾರೋಗ್ಯದ ಸಮಸ್ಯೆ ಎದುರಿಸಿದ ಪತ್ರಕರ್ತರ ಚಿಕಿತ್ಸೆಗೆ ಸ್ಪಂದನೆ. ಪತ್ರಕರ್ತರ ಹಿತಕಾಯಲು ಕ್ಷೇಮ ನಿಧಿ ಯೋಜನೆ

ರಾಜ್ಯ ಸಮ್ಮೇಳನ

ರೂಪಿಸಲಾಗಿದೆ.ಪತ್ರಕರ್ತರು ಮತ್ತು ಅವರ ಕುಟುಂಬದವರನ್ನು ಕೊರೋನ ಸೋಂಕಿನಿಂದ ಪಾರು ಮಾಡಲು ಲಸಿಕೆ ಒದಗಿಸಿಕೊಡುವಲ್ಲಿ ಗರಿಷ್ಠ ಪ್ರಯತ್ನ ನಡೆಸಿ ಅಭಿಯಾನದಲ್ಲಿ ಅಪೂರ್ವ ಯಶಸ್ಸು ಗಳಿಸಿತ್ತು.
ಪತ್ರಕರ್ತರಿಗೆ ಸರಕಾರದಿಂದ ನಿವೇಶನ ಒದಗಿಸಿಕೊಡಲು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಸ್ಥಾಪನೆ. ಕೊರೋನ ಕಾರಣದಿಂದಾಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ರಕ್ತದ ಕೊರತೆ ಉಂಟಾದಾಗ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮೂಲಕ ರಕ್ತದಾನದ ಬಗ್ಗೆ ಜನಜಾಗೃತಿ
ಮೂಡಿಸಿ, ರಕ್ತದ ಕೊರತೆ ನಿವಾರಿಸುವಲ್ಲಿ ಸಂಘ ಶ್ರಮಿಸಿದೆ. ಪತ್ರಕರ್ತರಲ್ಲಿ ಪರಸ್ಪರ ಸಹಕಾರ ಮನೋಭಾವ, ಸಮಾಜಸೇವೆಯ ಮಹತ್ವ,
ಒಗ್ಗಟ್ಟು, ಸೌಹಾರ್ದತೆ ಮೂಡಿಸುವ ಪ್ರಯತ್ನದಲ್ಲಿ

ಯಶಸ್ವಿಯಾಗಿರುವುದು. ತಾಲೂಕು ಸಂಘಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದೆ. ಸರಕಾರ ಮತ್ತು ದಾನಿಗಳ ನೆರವಿನಿಂದ ಕುತ್ಲೂರು ಸರಕಾರಿ ಶಾಲೆಯ ಅಭಿವೃದ್ಧಿ, ಕುತ್ಲೂರು, ಮಡಪ್ಪಾಡಿ ಮತ್ತು ಕೊಂಬಾರುವಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ. ಶಾಲೆಗಳಿಗೆ ಪುಸ್ತಕ ವಿತರಣೆ ಮಾಡಲಾಗಿದೆ. ಮಡಪ್ಪಾಡಿ ಮತ್ತು ಕಾವಳಮುಡೂರು ಗ್ರಾಮದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜನಜಾಗೃತಿ ಕಾರ್ಯಕ್ರಮ ರಾಜ್ಯದ ಗಮನ ಸೆಳೆದಿತ್ತು. ಪತ್ರಕರ್ತರಿಗೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವತಿಯಿಂದ ಉಚಿತ ಹೆಲ್ತ್ ಕಾರ್ಡ್ ವ್ಯವಸ್ಥೆ.ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಮೂಲಕ ಸತತ ಮೂರು ಬಾರಿ ಫ್ರೆಂಡ್ ಶಿಪ್ ಕ್ರಿಕೆಟ್ ಟೂರ್ನಮೆಂಟ್, ಜಿಲ್ಲೆಯಲ್ಲಿ ಸೌಹಾರ್ಧತೆಗಾಗಿ ಕಾರ್ಯಕ್ರಮಗಳು, ಮಾದಕ ವಿರೋಧಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಭತ್ತದ ಕೃಷಿಗೆ ಉತ್ತೇಜನ ನೀಡಲು ಪತ್ರಕರ್ತರಿಂದ ಭತ್ತದ ನಾಟಿ ಮತ್ತುಕೊಯ್ಲು ಮೂಲಕ ಜಾಗೃತಿ ಕಾರ್ಯಕ್ರಮ

ಆರೋಗ್ಯ ಶಿಬಿರ

ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಪತ್ರಕರ್ತರ ನೆರವಿಗೆ ಧಾವಿಸಿರುವುದು. ದಾನಿಗಳ ಮೂಲಕ ಆಹಾರ ಕಿಟ್ ವ್ಯವಸ್ಥೆ ಮಾಡಿಕೊಟ್ಟಿದೆ.ಯೋಗ ತರಬೇತಿ ಶಿಬಿರ, ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ. ಬೀಚ್ ಸ್ವಚ್ಛತಾ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ, ಪ್ರತಿವರ್ಷ ವನಮಹೋತ್ಸವ ಕಾರ್ಯಕ್ರಮ. ಪರಿಸರ ಜಾಗೃತಿ ಕಾರ್ಯಕ್ರಮಗಳು,
ಪತ್ರಕರ್ತರಿಗೆ ಪ್ರತಿವರ್ಷ ಕ್ರೀಡಾಕೂಟ ಆಯೋಜನೆ ಸೇರಿದಂತೆ ಪತ್ರಕರ್ತರಿಗೆ ಹಾಗೂ ಸಮಾಜದ ಹಿತದೃಷ್ಟಿಯಿಂದ ಹೀಗೆ ಹತ್ತು ಹಲವು ಕಾರ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕ್ರಿಯಾಶೀಲ ಚಟುವಟಿಕೆಗಳನ್ನು ಗಮನಿಸಿ ಜಿಲ್ಲಾಳಿತ ಪ್ರಶಸ್ತಿ ಘೋಷಿಸಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜಿಗೆ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ
next post
ಹೆಚ್.ಎಂ.ನಂದಕುಮಾರ್ ನಿಂತಿಕಲ್ಲಿನಲ್ಲಿ ನಿರ್ಮಿಸಿದ ರಿಕ್ಷಾ ತಂಗುದಾಣ ಉದ್ಘಾಟನೆ:ಸಮಾಜಕ್ಕೆ ದೊಡ್ಡ ಸಂದೇಶ-ಶಕುಂತಳಾ ಶೆಟ್ಟಿ; ನಂದಕುಮಾರ್ ಶಾಸಕರಾಗಿ ಆಯ್ಕೆಯಾಗಲು ಪ್ರತಿಯೊಬ್ಬರೂ ಪಣ ತೊಡಿ: ಭರತ್ ಮುಂಡೋಡಿ.

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ...

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಾರಿ: ಹೃದಯ ವೈಶಾಲ್ಯ...

June 7, 2023

ವಾಯುಭಾರ ಕುಸಿತ: ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ

June 7, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಮಂಗಳೂರಿನಲ್ಲಿ ಮಳೆ
  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ