ಸುಳ್ಯ:ಸಮಾಜದ ಹಿತ ಕಾಪಾಡುವ ನಿಟ್ಟಿನಲ್ಲಿ ಪತ್ರಕರ್ತರ ಬರಹಗಳು ಬಹುಮುಖ್ಯವಾದುದು. ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಪತ್ರಕರ್ತರ ಬರಹಗಳು ಪ್ರೇರಣೆ ಎಂದು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ ಹೇಳಿದ್ದಾರೆ. ಆ.31ರಂದು ಪ್ರೆಸ್ ಕ್ಲಬ್ನಲ್ಲಿ ನಡೆದ ಸಮಾರಂಭದಲ್ಲಿ
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಪ್ರಯುಕ್ತ

ಹೊರ ತರಲಾದ ‘ಬೆಳ್ಳಿ ಬರಹ’ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಒಗ್ಗಟ್ಟು ಮತ್ತು ನಂಬಿಕೆಯಿಂದ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸುವ ಸುಳ್ಯದ ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರು ಮಾದರಿಯಾಗಿದ್ದಾರೆ ಎಂದು ಅವರು ಹೇಳಿದರು. ಜಗತ್ತು ನಮಗೆ ಅನಿವಾರ್ಯವೇ ಹೊರತು ನಾವು ಜಗತ್ತಿಗೆ ಅನಿವಾರ್ಯ ಅಲ್ಲಾ ಎಂಬುದನ್ನು ಅರ್ಥ ಮಾಡಿಕೊಂಡರೆ ಮನುಷ್ಯನ ಅಹಂ ತನ್ನಿಂದ ತಾನೆ ಇಳಿದು ಹೋಗಲು ಸಾಧ್ಯ ಎಂದು ಅವರು ಹೇಳಿದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಅಧ್ಯಕ್ಷತೆ ವಹಿಸಿದ್ದರು.

ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಪ್ರೆಸ್ ಕ್ಲಬ್ ನಿರ್ದೇಶಕ ಯಶ್ವಿತ್ ಕಾಳಮನೆ ಮುಖ್ಯ ಅತಿಥಿಗಳಾಗಿದ್ದರು.
ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಗಂಗಾಧರ ಮಟ್ಟಿ, ಪ್ರಧಾನ ಕಾರ್ಯದರ್ಶಿ ದುರ್ಗಾಕುಮಾರ್ ನಾಯರ್ ಕೆರೆ ವೇದಿಕೆಯಲ್ಲಿದ್ದರು.
ಸ್ಮರಣ ಸಂಚಿಕೆ ಪ್ರಧಾನ ಸಂಪಾದಕ ಜೆ.ಕೆ. ರೈ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ ಸ್ವಾಗತಿಸಿದರು. ಕೋಶಾಧಿಕಾರಿ ದಯಾನಂದ ಕಲ್ನಾರ್ ವಂದಿಸಿದರು. ಜಿಲ್ಲಾ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಕೆವಿಜಿ ದಂತ ಮಹಾವಿದ್ಯಾಲಯದ ಆಡಳಿತಾಧಿಕಾರಿ ಬಿ.ಟಿ.ಮಾಧವ, ಕೆವಿಜಿ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ಕಮಲಾಕ್ಷ ನಂಗಾರು, ಪ್ರೊ.ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.
