ಸುಳ್ಯ: ಕೆವಿಜಿ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಮರ ಸುಳ್ಯದ ಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 96ನೇ ಜನ್ಮ ದಿನಾಚರಣೆಯ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ವತಿಯಿಂದ ಸುಳ್ಯ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ
ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ ಅವರು ಹಣ್ಣು ಹಂಪಲುಗಳನ್ನು ವಿತರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಕಮಿಟಿ ಬಿಯ ಪ್ರಧಾನ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್, ನಿರ್ದೇಶಕ ಮೌರ್ಯ ಆರ್.ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಊರುಬೈಲು, ಪ್ರಮುಖರಾದ
ಸುನಿಲ್ ಕೇರ್ಪಳ, ಶಾಫಿ ಕುತ್ತಮೊಟ್ಟೆ, ಕೆವಿಜಿ ಶಿಕ್ಷಣ ಸಂಸ್ಥೆಗಳ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಉದ್ಯೋಗಿಗಳಾದ ಡಾ.ಸುರೇಶ್, ಡಾ.ಮೋಕ್ಷಾ ನಾಯಕ್, ಯಶೋಧಾ ರಾಮಚಂದ್ರ, ಚಿದಾನಂದ ಬಾಳಿಲ, ಅರುಣ್ ಕುಮಾರ್, ಅಣ್ಣಯ್ಯ, ಮಾಧವ ಬಿ.ಟಿ, ಪ್ರಸನ್ನ ಕಲ್ಲಾಜೆ, ಭವಾನಿಶಂಕರ ಅಡ್ತಲೆ, ನಾಗೇಶ್ ಕೊಚ್ಚಿ, ಡಾ.ಮನೋಜ್, ದಿನೇಶ್ ಮಡ್ತಿಲ ಮತ್ತಿತರರು ಉಪಸ್ಥಿತರಿದ್ದರು.