ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ರಾಷ್ಟ್ರ ಮಟ್ಟದ ಕೆವಿಜಿಸಿಇ ಹ್ಯಾಕ್ ವೈಸ್ -2025 ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು.ಕೆವಿಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಎಕ್ಸಿಕ್ಯುಟಿವ್ ಡೈರೆಕ್ಟರ್ ಮೌರ್ಯ ಆರ್. ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರ ಮಟ್ಟದ ಹ್ಯಾಕ್ ವೈಸ್ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಅಡಗಿರುವ ಸಾಮರ್ಥ್ಯ ಹೊರಹೊಮ್ಮಲು
ಅವಕಾಶ ಕಲ್ಪಿಸಲಾಗಿದೆ ಎಂದರು. ಕ್ಯೂಆರ್ ಸ್ಟೋರ್ ಬೆಂಗಳೂರು ಇದರ ಸಹ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಜಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಹ್ಯಾಕ್ ವೈಸ್ ಸ್ಪರ್ಧೆಯನ್ನು ರಾಷ್ಟ್ರ ಮಟ್ಟದಲ್ಲಿ ನಡೆಸಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ವಿಶೇಷ ಸಾಮರ್ಥವನ್ನು ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.
ಎ.ಒ.ಎಲ್.ಇ ಕಮಿಟಿ ಬಿ ಸಿಇಒ ಹಾಗೂ ವಿಟಿಯು ಎಕ್ಸಿಕ್ಯುಟಿವ್ ಕೌನ್ಸಿಲ್ ಮೆಂಬರ್ ಡಾ. ಉಜ್ವಲ್ ಯು.ಜೆ ಮಾತನಾಡಿ ವಿದ್ಯಾರ್ಥಿಗಳಲ್ಲಿ ಆಧುನಿಕ ಜಗತ್ತಿನ ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸುವ ಆರ್ಟಿಫಿಯಲ್ ಇಂಟೆಲಿಜೆನ್ಸ್ ಟೆಕ್ನಾಲಜಿ ವಿಭಾಗದ ಮೂಲಕ ಕೆವಿಜಿ ಹ್ಯಾಕ್ ವೈಸ್ ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ

ಟೆಕ್ನಿಕಲ್ ಐಡಿಯಾಗಳನ್ನು ಪ್ರದರ್ಶಿಸಲು ಇದೊಂದು ಅವಕಾಶ. ವಿದ್ಯಾರ್ಥಿಗಳ ಭವಿಷ್ಯದಲ್ಲಿ ಉದ್ಯೋಗವನ್ನು ಪಡೆಯುವುದಕ್ಕೆ, ಉನ್ನತ ಶಿಕ್ಷಣವನ್ನು ಪಡೆಯುವುದಕ್ಕೆ ಈ ಸ್ಪರ್ಧೆ ಪುಷ್ಟಿ ನೀಡಲಿದೆ ಎಂದರು.
ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ವಿ, ಕ್ವಾನ್ ಟೆಕ್ ಒರಿಜಿನ್ ಬೆಂಗಳೂರು ಇದರ ಸಿಇಒ ಅನಂತ್ ಮಲ್ಯ, ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ, ಸ್ಪೇರಾ ಹೈವ್ ಕ್ಲಬ್ ಅಧ್ಯಕ್ಷ ಮಹಮ್ಮದ್ ಅಶ್ರದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕನ್ವೀನರ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಎ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿದ್ದ ಹ್ಯಾಕ್ ವೈಸ್ ಕಾರ್ಯಕ್ರಮದ ಚೀಫ್ ಕಾರ್ಡಿನೇಟರ್ ಪ್ರೊ. ಕಿಶೋರ್ ಕುಮಾರ್ ವಂದಿಸಿದರು. ಸಮೃದ್ಧಿ ಎಂ.ಡಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಮಾನ್ಯ ಕಾರ್ಯಕ್ರಮ ನಿರೂಪಿಸಿದರು. ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಎಒಎಲ್ಇ ಕಮಿಟಿ ಬಿ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಹ್ಯಾಕ್ ವೈಸ್ ಎ 26ರಂದು ಸಮಾಪನಗೊಳ್ಳಲಿದೆ.