ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪ್ರಸಕ್ತ ವರ್ಷದ “ಪೋಷಕರ ಸಭೆ” ಜು.22ರಂದು ಕಾಲೇಜಿನ ಅಡಿಟೋರಿಯಂನಲ್ಲಿ ನಡೆಯಿತು.ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಪ್ರಾಸ್ತಾವಿಕವಾಗಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
2022-23ನೇ ಸಾಲಿನಲ್ಲಿ ಕಾಲೇಜಿನಲ್ಲಿ ಕೈಗೊಂಡ ಕಾರ್ಯಗಳನ್ನು ವಿವರಿಸಿದರು. ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರಸ್ತುತ ವಿದ್ಯಮಾನಗಳ
ಜೊತೆಗೆ ಕೈ ಜೋಡಿಸುವುದರ ಜೊತೆಗೆ ಅದಕ್ಕೆ ಹೊಂದಿಕೊಂಡು, ಹೋಗಬೇಕೆಂದು ಮನವರಿಕೆ ಮಾಡಿದರು. ಕಾಲೇಜಿನಲ್ಲಿ ಅಳವಡಿಸಿದ “ಪ್ರಿಪರೇಟರಿ ಎಕ್ಸಾಂ” ಮಾದರಿಯಿಂದಾಗಿ, ಮೊದಲನೇ ವರ್ಷದ ವಿದ್ಯಾರ್ಥಿಗಳ ಕಳೆದ ಸೆಮಿಸ್ಟರ್ನ ಫಲಿತಾಂಶವು, ಯುನಿರ್ವಸಿಟಿಯ ಒಟ್ಟಾರೆ ಫಲಿತಾಂಶದಿಂದ ಹೆಚ್ಚಾಗಿದ್ದು ಈ ವರ್ಷ ದಾಖಲೆಯ 92% ಫಲಿತಾಂಶಕ್ಕಾಗಿ ಉಪನ್ಯಾಸಕವೃಂದ ಮತ್ತು ವಿದ್ಯಾರ್ಥಿವೃಂದವನ್ನು ಅಭಿನಂದಿಸಿದರು. 100% ಪ್ಲೇಸ್ಮೆಂಟ್ ಎಂಬ ಧ್ಯೇಯವಾಕ್ಯದೊಂದಿಗೆ, ಎಲ್ಲಾ ಪ್ರಯತ್ನಗಳು ನಡೆಯುತ್ತಿದ್ದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ, ಮೂರನೇ ಸೆಮಿಸ್ಟರ್ನಲ್ಲಿಯೇ ಉದ್ಯೋಗ ತರಭೇತಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದ್ದು, ಪೋಷಕರು ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನಹರಿಸಿ, ಅವರು ಸಕ್ರಿಯವಾಗಿ ಕಾರ್ಯಗಾರಗಳಲ್ಲಿ ಪಾಲ್ಗೊಳ್ಳುವಂತೆ ತೊಡಗಿಸಿ ಕೊಳ್ಳಬೇಕೆಂದರು. ನಂತರ ಪೋಷಕರ ಅಭಿಪ್ರಾಯ, ಸಲಹೆ ಸೂಚನೆಗಳನ್ನು ಪಡೆಯಲಾಯಿತು. ಕಾಲೇಜಿನ ಅಭಿವೃದ್ಧಿಗೆ ಬೇಕಾದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ಶೈಕ್ಷಣಿಕ ವರ್ಷದ ಕಾಲೇಜಿನ ಕ್ರಮಗಳ ಬಗ್ಗೆ ಪೋಷಕರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ.ಯವರು, ಕಾಲೇಜಿನ ಆಗುಹೋಗುಗಳ ಬಗ್ಗೆ ಪೋಷಕರಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಮೆಂಟರ್ ವ್ಯವಸ್ಥೆ – ಪ್ರತಿ ಟೆಸ್ಟ್ನ ಮಾರ್ಕ್ ಲಿಸ್ಟ್ ಮತ್ತು ಹಾಜರಾತಿ ರಿಪೋರ್ಟ್ ಕಳುಹಿಸುವ ವ್ಯವಸ್ಥೆ ಬಗ್ಗೆ ವಿವರಿಸಿ, ಪೋಷಕರು ತಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಸಹಕರಿಸಬೇಕೆಂದು ಕೋರಿದರು.
ಕಾರ್ಯಕ್ರಮದ ಸಂಘಟಕರಾದ ಕಾಲೇಜಿನ ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಮಾಶಂಕರ್ ಕೆ.ಎಸ್. ಸ್ವಾಗತಿಸಿದರು.ರಸಾಯನ ಶಾಸ್ತ್ರ ಮುಖ್ಯಸ್ಥೆ ಡಾ. ಸುರೇಖಾ ಎಂ. ವಂದಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.