ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕೆ.ವಿ.ಜಿ. ಇಂಟರ್ನ್ಯಾಶನಲ್ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಅರುಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಮಾತನಾಡಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಯ ಮಹತ್ವ ಬಹಳ ಹೆಚ್ಚಿನದ್ದು. ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸರಕಾರದ ಉದ್ಯೋಗಾವಕಾಶ ಹೆಚ್ಚು ಎಂದರು. ಕ್ರೀಡಾ
ಮನೋಭಾವದಿಂದ ವಿದ್ಯಾರ್ಥಿ ಬದುಕನ್ನು ಆನಂದಿಸಬೇಕು ಎಂದು ಕರೆ ನೀಡಿದರು. ಪ್ರಾಂಶುಪಾಲರಾದ ಡಾ. ಸುರೇಶ ವಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆ.ವಿ.ಜಿ. ಇಂಟರ್ನ್ಯಾಶನಲ್ ಪಬ್ಲಿಕ್ ಸ್ಕೂಲ್ನ ದೈಹಿಕ ಶಿಕ್ಷಕ ತೀರ್ಥವರ್ಣ ತೀರ್ಪುಗಾರರಾಗಿ ಸಹಕರಿಸಿದರು.ಕ್ರೀಡಾ ಕೂಟದಲ್ಲಿ ಎನ್.ಎಸ್.ಎಸ್. ವತಿಯಿಂದ ತಂಪಾದ ಪಾನೀಯ ವಿತರಣೆ ಮತ್ತು ಪ್ರಥಮ ಚಿಕಿತ್ಸೆಯ ಸೌಲಭ್ಯವನ್ನು ಒದಗಿಸಿದರು.

ದೈಹಿಕ ಶಿಕ್ಷಕ ಭಾಸ್ಕರ್ ಎಸ್.ಬಿ., ಪ್ರೊ. ಅಜಿತ್ ಬಿ.ಟಿ., ಎನ್.ಎಸ್. ಎಸ್ ಘಟಕಾಧಿಕಾರಿ ಡಾ.ಪ್ರಜ್ಞಾ ಎಂ.ಆರ್ ಮತ್ತು ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ. ಲೋಕೇಶ್ ಪಿ.ಸಿ ಕ್ರೀಡಾ ಕೂಟವನ್ನು ಸಂಯೋಜಿಸಿದರು. ಉಪ ಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ, ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಅರುಣ್ ಕುರುಂಜಿ, ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋದಕ, ಬೋದಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಆಟೋಟ ಸ್ಪರ್ಧೆಗಳ ಜೊತೆಗೆ ಉಪನ್ಯಾಸಕ ವೃಂದದವರಿಗೂ ಸ್ಲೋ ಬೈಕ್ ರೇಸಿಂಗ್ ಸ್ಪರ್ಧೆಯನ್ನು ಆಯೋಜಿಸಿದ್ದು, ಕ್ರೀಡಾಕೂಟಕ್ಕೆ ಹೆಚ್ಚಿನ ಮೆರುಗು ತಂದಿತ್ತು.