The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2022-23 ನೇ ಸಾಲಿನ ಬಿ.ಇ. ವಿದ್ಯಾರ್ಥಿಗಳ ಶೈಕ್ಷಣಿಕ ಪೂರ್ವಭಾವೀ ಚಟುವಟಿಕೆಗಳಿಗೆ ಚಾಲನೆ

by ದಿ ಸುಳ್ಯ ಮಿರರ್ ಸುದ್ದಿಜಾಲ October 19, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 19, 2022
Share this article

ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ‘ಶೈಕ್ಷಣಿಕ ಪೂರ್ವಭಾವೀ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕೆ.ವಿ.ಜಿ.ಸಿ.ಇ. ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ‘ಕಾಲೇಜಿನಲ್ಲಿ ಹೊಸ ಶೈಕ್ಷಣಿಕ ಪದ್ಧತಿಯ ಅನುಸಾರವಾಗಿ ಕಾಲೇಜಿನ ಎಲ್ಲಾ ಮೂಲ ಸೌಕರ್ಯಗಳನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸಮೂಹಕ್ಕೆ ಅನುಕೂಲವಾಗುವ ಹಾಗೆ ಸಿದ್ಧಗೊಂಡಿದೆ.ಇದರ ಸಂಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಆಶಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗೂ ಅಂತಿಮ ಸೆಮಿಸ್ಟರ್ ವೇಳೆಗೆ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಉದ್ಯೋಗಾವಕಾಶವನ್ನು ಒದಗಿಸಿಕೊಡುವ ಭರವಸೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ
ಡಾ. ಉಜ್ವಲ್ ಯು.ಜೆ ಕಠಿಣ ಪರಿಶ್ರಮ, ಶಿಸ್ತು, ಶ್ರದ್ಧೆ ಇವೇ ಮುಂತಾದವುಗಳನ್ನು ಒಳಗೊಂಡ ಅಧ್ಯಯನವು ವಿದ್ಯಾರ್ಥಿಗಳಿಗೆ ಯಶಸ್ಸನ್ನು ತಂದು ಕೊಡುತ್ತವೆ ಎಂದು ಹೇಳಿದರು. ವಿದ್ಯಾರ್ಥಿ ಜೀವನದಿಂದಲೇ ಸಾಮಾಜಿಕ ಕಳಕಳಿಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾ. ಉಮಾಶಂಕರ್ ಕೆ.ಎಸ್. ಮಾತನಾಡಿದರು. ಉಪ ಪ್ರಾಂಶುಪಾಲ ಡಾ. ಶ್ರೀಧರ್ ಕೆ. ಸ್ವಾಗತಿಸಿ,ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ
ಡಾ. ಚಂದ್ರಶೇಖರ್ ಎ. ವಂದಿಸಿಸರು. ಎಂ.ಬಿ.ಎ. ವಿದ್ಯಾರ್ಥಿನಿ ಅನುಷಾಲಕ್ಷ್ಮಿ ಪ್ರಾರ್ಥನೆಗೈದು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ಪ್ರೊ. ಅರುಣ ಪಿ.ಜಿ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಡಾ. ಲೇಖ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥರು ಪ್ರೊ. ಕೃಷ್ಣಾನಂದ ಎ., ಭೌತಶಾಸ್ತ್ರ ವಿಭಾಗ ಮುಖ್ಯಸ್ಥರು ಹಾಗು ಡೀನ್-ಎಕ್ಸಾಮಿನೇಶನ್ ಡಾ. ಪ್ರವೀಣ ಎಸ್.ಡಿ., ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರು ಡಾ. ಸುರೇಖ ಎಂ., ಟ್ರೈನಿಂಗ್ & ಪ್ಲೇಸ್‌ಮೆಂಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ.,
ಡೀನ್-ಅಡ್ಮಿಶನ್ ಪ್ರೊ. ಬಾಲಪ್ರದೀಪ್ ಕೆ.ಎನ್., ಡೀನ್-ಹಾಸ್ಟೆಲ್ ಡಾ. ಭಾಗ್ಯ ಹೆಚ್.ಕೆ., ಡೈರೆಕ್ಟರ್ ಆಫ್ ಪಿ.ಜಿ. ಸ್ಟಡೀಸ್ ಡಾ. ಸವಿತಾ ಎಂ., ಡೀನ್-ರೀಸರ್ಚ್ ಡಾ. ಸವಿತಾ ಸಿ.ಕೆ., ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಡಾ. ಪ್ರಜ್ಞಾ ಎಂ.ಆರ್., ಪ್ರೊ. ಲೋಕೇಶ್ ಪಿ.ಸಿ., ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್. ಬೇಲೆಗದ್ದೆ ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
next post
ಸಂಪಾಜೆ: ಗ್ರಾಮ ಮಟ್ಟದ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಹಾಗೂ ಅರೋಗ್ಯ, ಆಶಾ ಕಾರ್ಯಕರ್ತರ ಸಭೆ

You may also like

ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

June 4, 2023

ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಯ ಪ್ರಥಮ‌ ಸುತ್ತಿನ...

June 4, 2023

ಕೆರೆಗೆ ಬಿದ್ದು ದಡ ಸೇರಲಾಗದೆ ಯಾತನೆ ಅನುಭವಿಸಿದ ಕಾಡಾನೆಯ ರಕ್ಷಣೆ

June 3, 2023

ನಿಧನರಾದ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯಾತ್ ಅವರಿಗೆ ಸುಳ್ಯದಲ್ಲಿ ಶ್ರದ್ದಾಂಜಲಿ...

June 3, 2023

ಸುಳ್ಯದ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಯು.ಟಿ.ಖಾದರ್ ಅವರಿಗೆ ಸನ್ಮಾನ

June 3, 2023

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಉದ್ಯೋಗ ಮಾರ್ಗದರ್ಶನ ಕಾರ್ಯಾಗಾರ

June 3, 2023

ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

June 2, 2023

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಿಂದ ವಿವಿಧ ಕಂಪೆನಿಗಳಿಗೆ ಆಯ್ಕೆ

June 2, 2023

ಸುಳ್ಯ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಧನೇಶ್ ಕೆ. ಎಎಸ್‌ಐಯಾಗಿ ಭಡ್ತಿ: ವರ್ಗಾವಣೆ

June 2, 2023

ಬೆಳ್ಳಾರೆ: ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್‌ನಲ್ಲಿ ಪ್ರಾರಂಭೋತ್ಸವ

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ