ಸುಳ್ಯ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಬಿ. ಇ. ಮತ್ತು ಎಂ.ಟೆಕ್ ಪರೀಕ್ಷೆಯಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕೃತಿ ಎಸ್. ಪದವಿ ಪರೀಕ್ಷೆಯಲ್ಲಿ 1ನೇ ರ್ಯಾಂಕ್ (ವಿಟಿಯು ಚಿನ್ನದ ಪದಕ) ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗದ

– ಎಂ.ಟೆಕ್ ಕನ್ಸ್ಟ್ರಕ್ಷನ್ ಟೆಕ್ನಾಲಜಿ ವಿಭಾಗದಲ್ಲಿ – ಪ್ರಜ್ಞಾ, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ 1ನೇ ರ್ಯಾಂಕ್ (ವಿಟಿಯು ಚಿನ್ನದ ಪದಕ) ಪಡೆದಿರುತ್ತಾರೆ. ಇವರನ್ನು ಡಾ. ರೇಣುಕಾಪ್ರಸಾದ್ ಕೆ.ವಿ., ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಉಜ್ವಲ್ ಊರುಬೈಲು ಮತ್ತು ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್., ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ. ಹಾಗೂ ರ್ಯಾಂಕ್ ವಿಜೇತರು ಪ್ರತಿಷ್ಠಿತ ಕೆ.ವಿ.ಜಿ. ಚಿನ್ನದ ಪದಕವನ್ನು ಪಡೆಯಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.