ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿರ್ಸ್ ಡೇ ಕಾರ್ಯಕ್ರಮವು ಕೆ.ವಿ.ಜಿ.ಸಿ.ಇ. ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ.ಯವರು ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ಸರ್. ಎಂ ವಿಶ್ವೇಶ್ವರಯ್ಯ ಅವರು ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನಕ್ಕೆ ಪಾತ್ರರಾದರು. ಅವರ
ಪ್ರಜಾಸೇವೆಗೆ ಆ ಪ್ರಶಸ್ತಿ ದೊರೆತಿದೆ. ವಿದ್ಯಾರ್ಥಿಗಳು ಪ್ರತಿಕ್ಷಣವೂ ಮೌಲ್ಯಯುತವಾಗಿ ಸ್ಪಷ್ಟ ಗುರಿ ಸಾಧನೆಗೆ ಶ್ರಮಿಸಿದರೆ ಅಂದುಕೊಂಡದ್ದನ್ನು ಸಾಧಿಸಬಹುದು ಎಂದು ಸರ್.ಎಂ.ವಿ.ಯವರ ಧ್ಯೇಯವಾಕ್ಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಮಂಡಲ ಕೆ.ವಿ.ಜಿ. ಐ.ಟಿ.ಐ. ಪ್ರಾಂಶುಪಾಲ ಪ್ರೊ. ಶ್ರೀಕಾಂತ್ ಮುಖ್ಯ ಅತಿಥಿಯಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಮಾತನಾಡಿದರು. ಇಂಜಿನಿರ್ಸ್ ಡೇ ಪ್ರಯುಕ್ತ ಪ್ರೊ. ಶ್ರೀಕಾಂತ್ ಕೆ. ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಡೀನ್-ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಮಾಶಂಕರ್ ಕೆ.ಎಸ್. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಪ್ರೊ. ಲೋಕೇಶ್ ಪಿ.ಸಿ ಧನ್ಯವಾದ ಸಮರ್ಪಿಸಿದರು. ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಅನನ್ಯ ಹೆಬ್ಬಾರ್ ಪ್ರಾರ್ಥಿಸಿ, ಎನ್.ಎಸ್.ಎಸ್. ಘಟಕಾಧಿಕಾರಿಗಳಾದ ಡಾ. ಪ್ರಜ್ಞ ಎಂ.ಆರ್ ಮತ್ತು ವಿದ್ಯಾರ್ಥಿನಿ ಸಪ್ತಮಿ ಕಾರ್ಯಕ್ರಮವನ್ನು ಸಂಯೋಜಿಸಿದರು. ಇದೇ ಸಂದರ್ಭದಲ್ಲಿ ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಎಲ್ಲಾ ವಿಭಾಗಳ ಮುಖ್ಯಸ್ಥರು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂಧಿಗಳು ಭಾಗವಹಿಸಿದ್ದರು.