ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಿಶುವಿಹಾರದ ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಯಿತು. ಮುದ್ದು ಕೃಷ್ಣ ವೇಷ ಹಾಕಿದ ಪುಟಾಣಿಗಳು ಎಲ್ಲರ ಮನ ಸೆಳೆದರು. ಭಾಗವಹಿಸಿದ ಎಲ್ಲಾ
ಪುಟಾಣಿಗಳಿಗೆ ಸಮಾಧಾನಕರ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಕೃಷ್ಣನ ಹಿರಿಮೆಯ ಮಹತ್ವದ ಬಗ್ಗೆ ಶಿಕ್ಷಕಿ ಹೇಮಾ ವೈಲಾಯ ತಿಳಿಸಿದರು. ಶಿಕ್ಷಕಿ ಸುನಿತಾ ನಿರೂಪಿಸಿದರು. ಸ್ನೇಹ ಗದಗ್ ಸ್ವಾಗತಿಸಿ, ರೇಖಾ ಸತ್ಯ ವಂದಿಸಿದರು.ಕಾರ್ಯಕ್ರಮದಲ್ಲಿ ಪೋಷಕ ವರ್ಗ ಮತ್ತು ಶಿಕ್ಷಕ -ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.












