ಸುಳ್ಯ: ಲಯನ್ಸ್ ಜಿಲ್ಲೆಯ 119 ಕ್ಲಬ್ಗಳ ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಸಂಜೀತ್ ಶೆಟ್ಟಿ ಹೇಳಿದ್ದಾರೆ. ಸುಳ್ಯ ಲಯನ್ಸ್ ಕ್ಲಬ್ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಯನ್ಸ್ ಸಮಾಜ ಸೇವಾ ಕಾರ್ಯಕ್ರಮದ
ಅಂಗವಾಗಿ ಮನೆಯಿಲ್ಲದವರಿಗೆ ಮನೆ ನಿರ್ಮಿಸುವ ಯೋಜನೆಯನ್ವಯ ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಮಹಿಳೆಗೆ ಮನೆ ನಿರ್ಮಿಸಿ ನೀಡಲಾಗಿದೆ. ಅತ್ಯುತ್ತಮ ಸೇವಾ ಕಾರ್ಯಕ್ರಮಗಳ ಮೂಲಕ ಜಿಲ್ಲೆಯ 119 ಕ್ಲಬ್ಗಳ ಪೈಕಿ ಸುಳ್ಯ ಲಯನ್ಸ್ ಕ್ಲಬ್ 9ನೇ ಸ್ಥಾನದಲ್ಲಿದೆ ಎಂದು ಅವರು ಹೇಳಿದರು. ಪರಿಸರ ಸಂರಕ್ಷಣೆ ಯೋಜನೆ ಅನ್ವಯ ವಗ್ಗದಿಂದ ಪೂಂಜಾಲಕಟ್ಟೆ ತನಕ ರಸ್ತೆ ಬದಿಯಲ್ಲಿ 1800 ಗಿಡಗಳನ್ನು ನೆಟ್ಟು ಪೋಷಿಸಲಾಗುತಿದೆ. ಸಕಲೇಶಪುರದಲ್ಲಿ 35 ಲಕ್ಷ ವೆಚ್ಚದಲ್ಲಿ ಮುಕ್ತಿಧಾಮವನ್ನು ನಿರ್ಮಿಸಲಾಗುತಿದೆ. ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆಯಲ್ಲಿ ವಿವಿಧ ಕಡೆಗಳಲ್ಲಿ 11 ಡಯಾಲಿಸಿಸ್ ಮೆಷಿನ್ಗಳನ್ನು ನೀಡಲಾಗುವುದು. ಸರಕಾರಿ ಶಾಲೆಗಳಿಗೆ 100 ಕಂಪ್ಯೂಟರ್ಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ 20 ಲ್ಯಾಪ್ಟಾಪ್ ನೀಡುವ ಯೋಜನೆ ಇದೆ ಎಂದು ಅವರು ಹೇಳಿದರು.
ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಚೆಯರ್ಮೆನ್ ವಸಂತಕುಮಾರ್ ಶೆಟ್ಟಿ, ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಅನಿಲ್ಕುಮಾರ್
ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷೆ ರೂಪಶ್ರೀ ಜೆ ರೈ, ಕಾರ್ಯದರ್ಶಿ ದೀಪಕ್ ಕುತ್ತಮೊಟ್ಟೆ, ಕೋಶಾಧಿಕಾರಿ ಡಾ.ಲಕ್ಷ್ಮೀಶ,
ಪ್ರಮುಖರಾದ ಜಯರಾಮ ದೇರಪ್ಪಜ್ಜನಮನೆ, ಎನ್.ಜಯಪ್ರಕಾಶ್ ರೈ, ಪ್ರಾಂತೀಯ ಅಧ್ಯಕ್ಷೆ ಸಂಧ್ಯಾ ರೈ, ಜಯಂತ ರೈ ಮತ್ತಿತರರು ಉಪಸ್ಥಿತರಿದ್ದರು.