ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಗಂಗಾನದಿ ತಟದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳ ಇಂದಿನಿಂದ ಆರಂಭಗೊಂಡಿದೆ. ಸಾಧು–ಸಂತರು ಸೇರಿ ದೇಶ–ವಿದೇಶಗಳಿಂದ ಭಕ್ತರ ಮಹಾಪೂರವೇ ಹರಿದು ಬರುತ್ತಿದೆ.ಫೆಬ್ರುವರಿ 26ರವರೆಗೆ 45 ದಿನ ಮೇಳ ನಡೆಯಲಿದ್ದು, ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದ ಆಸುಪಾಸು 10 ಸಾವಿರ ಎಕರೆಯಷ್ಟು ವಿಸ್ತೀರ್ಣದಲ್ಲಿ
ಸಿದ್ಧತೆ ಕೈಗೊಳ್ಳಲಾಗಿದ್ದು, 25 ವಲಯಗಳನ್ನಾಗಿ ವಿಂಗಡಿಸಲಾಗಿದೆ.ಈ ಬಾರಿ ನಡೆಯುತ್ತಿರುವುದು 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭ ಮೇಳ. ಹಿಂದಿನ ಬಾರಿ ಕುಂಭ ಮೇಳದಲ್ಲಿ 24 ಕೋಟಿ ಮಂದಿ ಭಾಗವಹಿಸಿದ್ದರು. ಈ ಬಾರಿ ಮಹಾಕುಂಭ ಮೇಳದಲ್ಲಿ 40 ಕೋಟಿಗು ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ.‘ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟ್ಯಂತರ ಜನರಿಗೆ ಇದು ಅತ್ಯಂತ ವಿಶೇಷವಾದ ದಿನವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.‘ಪ್ರಯಾಗರಾಜ್ನಲ್ಲಿ ಮಹಾಕುಂಭ ಮೇಳ ಆರಂಭವಾಗಿದೆ. ನಂಬಿಕೆ, ಭಕ್ತಿ ಮತ್ತು ಸಂಸ್ಕೃತಿಯ ಪವಿತ್ರ ಸಂಗಮದಲ್ಲಿ ಅಸಂಖ್ಯಾತ ಜನರನ್ನು ಒಟ್ಟಾಗಿ ಸೇರಲಿದ್ದಾರೆ. ಮಹಾಕುಂಭವು ಭಾರತದ ಆಧ್ಯಾತ್ಮಿಕ ಪರಂಪರೆಯನ್ನು ಸಾಕಾರಗೊಳಿಸುವುದರ ಜತೆಗೆ ನಂಬಿಕೆ ಮತ್ತು ಸಾಮರಸ್ಯವನ್ನು ಹೆಚ್ಚಿಸುತ್ತದೆ’ ಎಂದು ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.