ಸುಳ್ಯ:ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಸುಳ್ಯ ಶಿಕ್ಷಣ ಸಂಪನ್ಮೂಲ ಕೇಂದ್ರ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಹಾಗೂ ತಾಲೂಕು ಕನೂನು ಸೇವೆಗಳ ಸಮಿತಿ ಹಾಗೂ ಅಜ್ಜಾವರ, ಮಂಡೆಕೋಲು ಗ್ರಾಮ ಪಂಚಾಯತ್ಗಳ ಸಹಯೋಗದಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮ ಅಜ್ಜಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನ.13 ಜುರುಗಿತು.ಕಾರ್ಯಕ್ರಮವನ್ನು
ಸುಳ್ಯದ ಸಿವಿಲ್ ನ್ಯಾಯಾಧೀಶರು ಹಾಗೂ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಬಿ.ಮೋಹನ್ ಬಾಬು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ಸಂಪನ್ಮೂಲ ವ್ಯಕ್ರಿಗಳಾಗಿ ಮಾತನಾಡಿ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರವು ಮುಖ್ಯವಾಗಿದ್ದು ಸಮಾಜಕ್ಕೂ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಇರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಕ್ಕಳ ಮಾಸೋತ್ಸವ ಸಮಿತಿಯ ಸಂಚಾಲಕ
ಶಂಕರ್ ಪೆರಾಜೆ ವಹಿಸಿದ್ದರು. ವೇದಿಕೆಯಲ್ಲಿ ಅಜ್ಜಾವರ ಗ್ರಾ.ಪಂ.ಅಧ್ಯಕ್ಷೆ ದೇವಕಿ, ಮಂಡೆಕೋಲು ಗ್ರಾ.ಪಂ.ಅಧ್ಯಕ್ಷ ಕುಶಲ ಉದ್ದಂತಡ್ಕ , ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ,
ಹಸೈನಾರ್ ಜಯನಗರ , ಮಕ್ಕಳ ಮಾಸೋತ್ಸವ ಸಮಿತಿಯ ದ.ಕ.ಜಿಲ್ಲಾ ಸಂಚಾಲಕ ಮಹಮ್ಮದ್ ರಫೀಕ್ ದರ್ಬೆ, ಅಜ್ಜಾವರ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ , ಜಯಮಾಲ, ಪತ್ರಕರ್ತ ಹರೀಶ್ ಬಂಟ್ವಾಳ ಉಪಸ್ಥಿತರಿದ್ದರು. ಹಸೈನಾರ್ ಜಯನಗರ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ನಾರಾಯಣ ಕಿಲಂಗೋಡಿ ನಿರೂಪಿಸಿ ಆಶೋಕ್ ಪೀಚೆ ವಂದಿಸಿದರು.












