ಮಂಡೆಕೋಲು: ಸುಳ್ಯ ಅಮರ ಸಂಘಟನಾ ಸಮಿತಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ಮಂಡೆಕೋಲು ಗ್ರಾಮ ಪಂಚಾಯತ್ ಹಾಗೂ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಹಕಾರದೊಂದಿಗೆ ಆಧಾರ್ ನೊಂದಾಣಿ, ತಿದ್ದುಪಡಿ ಮತ್ತು ರಕ್ತದಾನ ಶಿಬಿರ ಫೆ. 25ರಂದು ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಅಮೃತ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿಯ ಅಧ್ಯಕ್ಷ ಸಾತ್ವೀಕ್ ಮಡಪ್ಪಾಡಿ ವಹಿಸಿದ್ದರು. ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯ ಬಾಲಚಂದ್ರ ದೇವರಗುಂಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಡೆಕೋಲು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರತಿಮಾ ಹೆಬ್ಬಾರ್ ,ಪಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು , ಉಪಾಧ್ಯಕ್ಷೆ ಜಲಜಾ ದೇವರಗುಂಡ , ವಕೀಲ ವಿಪುಲ್ ನೀರ್ಪಾಡಿ , ಪಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಚಾಕೋಟೆ, ಡಾ.ಸೀತಾರಾಮ್ ಭಟ್ ಆಧಾರ್ ಕೇಂದ್ರದ ಸಿಬ್ಬಂದಿ ಕೃಪೇಶ್ ಹಾಗೂ ಮೋಹಿತ್ ಉಪಸ್ಥಿತರಿದ್ದರು. ತಿರ್ಥೇಶ್ ಯಾದವ್ ಕಾರ್ಯಕ್ರಮ ನಿರೂಪಿಸಿದರು. ಸಾವಿತ್ರಿ ಕಣಿಮರಡ್ಕ ಸ್ವಾಗತಿಸಿ ಜಯಪ್ರಸಾದ್ ಸಂಕೇಶ ವಂದಿಸಿದರು. ಅಮರ ಸಂಘಟನಾ ಸಮಿತಿಯ ಪ್ರದೀಪ್ ಬೊಳ್ಳೂರು , ಪ್ರವೀಣ್ ಕುಲಾಲ್ , ಹಸ್ತವಿ ಮಡಪ್ಪಾಡಿ ,ಮನೀಶ್ ಪೈಲಾರು,ಅನೀತಾ ಕುಕ್ಕುಜಡ್ಕ ಉಪಸ್ಥಿದದರು. ಸಮಿತಿಯ ಸದಸ್ಯರು ಸಹಕರಿಸಿದರು.