ಮಂಗಳೂರು:ಮಂಗಳೂರು ಕಂಬಳಕ್ಕೆ ಈ ಬಾರಿ 9ನೇ ವರ್ಷದ ಸಂಭ್ರಮವಾಗಿರುವ ನಿಟ್ಟಿನಲ್ಲಿ ಒಂಬತ್ತು ರೀತಿಯ ವಿಭಿನ್ನ ಕಾರ್ಯಕ್ರಮ ಆಯೋಜಿಸುವ ಯೋಚನೆ ಇಟ್ಟುಕೊಂಡಿದ್ದೇವೆ ಎಂದು ಕ್ಯಾ. ಚೌಟ ತಿಳಿಸಿದ್ದಾರೆ.ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ
ನಗರದ ಪತ್ತುಮುಡಿ ಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಮಂಗಳೂರು ಕಂಬಳ ಇಷ್ಟೊಂದು ಯಶಸ್ವಿಯಾಗಿ ಹಾಗೂ ಅಚ್ಚು-ಕಟ್ಟಾಗಿ ನಡೆಯುತ್ತಿರುವುದಕ್ಕೆ ನಮ್ಮ ಯುವಕರ ತಂಡದ ಹುಮ್ಮಸ್ಸು ಪ್ರಮುಖ ಕಾರಣವಾಗಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.
ಸಭೆಯಲ್ಲಿ ಮಾಜಿ ಸಚಿವ ನಾಗರಾಜ ಶೆಟ್ಟಿ,ಕಂಬಳ ಸಮಿತಿಯ ಉಪಾಧ್ಯಕ್ಷ ಅನಿಲ್ ಕುಮಾರ್, ಗೌರವ ಸಲಹೆಗಾರರಾದ ಪ್ರಸಾದ್ ಕುಮಾರ್ ಶೆಟ್ಟಿ, ಕುಳೂರು ಪೊಯ್ಯೆಲು ಪಿ.ಆರ್ ಶೆಟ್ಟಿ, ಉಪಾಧ್ಯಕ್ಷರು ಹಾಗೂ ಮಾಜಿ ಮನಪಾ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಭರತ್ ಸೂಟರ್ ಪೇಟೆ, ಸಂದೀಪ್ ಗರೋಡಿ, ಸಂಜಯ ಪ್ರಭು, ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ ಉಪಸ್ಥಿತರಿದ್ದರು. ಈಶ್ವರ್ ಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಮನ್ಮಥ್ ಶೆಟ್ಟಿ ಪುತ್ತೂರು ನಿರೂಪಿಸಿ, ಕಂಬಳ ಸಮಿತಿ ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ವಂದಿಸಿದರು.














