ಸುಳ್ಯ:ದೇಶ ಕಂಡ ಅಪ್ರತಿಮ ಆರ್ಥಿಕ ಮತ್ತು ಶಿಕ್ಷಣ ತಜ್ಞ ಡಾ. ಮನಮೋಹನ್ ಸಿಂಗ್ ರವರು ದೇಶದ ಆರ್ಥಿಕತೆ ಯನ್ನು ಸದೃಢ ಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಎಂದು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಹೇಳಿದರು. ಅಗಲಿದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ

ಏರ್ಪಡಿಸಲಾದ ಶ್ರದ್ದಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.ಪುಷ್ಪ ನಮನ ಸಲ್ಲಿಸಿ ಮೌನ ಪ್ರಾರ್ಥನೆ ನಡೆಸಿ
ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಡಿಸಿಸಿ ಪ್ರದಾನ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ಮಾಧ್ಯಮ ಸಂಯೋಜಕ ನಂದರಾಜ್ ಸಂಕೇಶ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗೋಕುಲದಾಸ್, ಪವಾಜ್ ಕನಕಮಜಲು, ಧನುಷ್ ಕುಕ್ಕೆಟ್ಟಿ, ರಾಧಾಕೃಷ್ಣ ಆರಂಬೂರು, ರಾಜು ಪಂಡಿತ್, ಶಹೀದ್ ಪಾರೆ, ತೀರ್ಥರಾಮ ಜಾಲ್ಸೂರು, ಕೇಶವ ಆಲೆಟ್ಟಿ, ಮಹೇಶ್ ಕುರುಂಜಿ ಭಾಗ್, ಗಂಗಾಧರ ಮೇನಾಲ, ದಿನೇಶ್ ಗುತ್ತಿಗಾರು, ಮೊದಲಾದವರು ಉಪಸ್ಥಿತರಿದ್ದರು.ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ್ ಸ್ವಾಗತಿಸಿ ವಂದಿಸಿದರು.